Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರೇಕ್ ನಿರೀಕ್ಷೆಯಲ್ಲಿ ಅಮೂಲ್ ಬೇಬಿ ಅಮೂಲ್ಯ
'ಮನಸಾಲಜಿ' ಚಿತ್ರದ ಬಳಿಕ ಕಾಣೆಯಾಗಿದ್ದ ಚಿಲಿಪಿಲಿ ಬೆಡಗಿ ಅಮೂಲ್ಯ ಎರಡನೇ ಇನ್ನಿಂಗ್ಸ್ ಗೆ ಸಜ್ಜಾಗಿದ್ದಾರೆ. ಈ ಬಾರಿ ಅವರು 'ಶ್ರಾವಣಿ ಸುಬ್ರಹ್ಮಣ್ಯ' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದ ನಾಯಕ ನಟರಾಗಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೂ ಇದೊಂದು ಸವಾಲಿನ ಚಿತ್ರ.
ಏಕೆಂದರೆ ಅವರ 'ಆಟೋರಾಜ' ಚಿತ್ರದ ಮೀಟರ್ ನಿರೀಕ್ಷಿಸಿದ ಮಟ್ಟದಲ್ಲಿ ಓಡಿಲ್ಲ. ಈಗ ಅವರೂ ಬ್ರೇಕ್ ನಿರೀಕ್ಷೆಯಲ್ಲಿದ್ದಾರೆ. ಇಷ್ಟಕ್ಕೂ ಈ ಚಿತ್ರಕ್ಕೂ ತೆಲುಗಿನ 'ಶ್ರಾವಣಿ ಸುಬ್ರಹ್ಮಣ್ಯಂ' ಚಿತ್ರಕ್ಕೂ ಸಂಬಂಧವಿಲ್ಲವಂತೆ. ಹೆಸರಷ್ಟೇ ರಿಮೇಕ್, ಕಥೆ ಸ್ವಮೇಕ್ ಎನ್ನುತ್ತದೆ ಚಿತ್ರತಂಡ.
ಚಿತ್ರದಲ್ಲಿ ಗಣೇಶ್ ಅವರದು ಆರ್ಕೆಸ್ಟ್ರಾದಲ್ಲಿ ಹಾಡುವ ಹುಡುಗನ ಪಾತ್ರ. ಹೆಸರು ಬಾಲಸುಬ್ರಹ್ಮಣ್ಯಂ. ಇಳಯರಾಜಾರಂತಹ ಮಹಾನ್ ಸಾಧಕರನ್ನು ನೆನೆಯುತ್ತಲೇ ತಾನೂ ಅಷ್ಟು ಎತ್ತರಕ್ಕೆ ಏರಬೇಕೆಂದು ಬಯಸುತ್ತಿರುತ್ತಾನೆ. ಮುಂದೇನಾಗುತ್ತದೆ ಎಂಬುದನ್ನು ತೆರೆಯ ಮೇಲೆಯೇ ನೋಡಿ ಆನಂದಿಸಿ ಎನ್ನುತ್ತದೆ ಚಿತ್ರತಂಡ.
ಸುರೇಶ್ ನಿರ್ಮಿಸುತ್ತಿರುವ ಈ ಚಿತ್ರದ ಸಂಗೀತ ನಿರ್ದೇಶಕರು ವಿ ಹರಿಕೃಷ್ಣ. 'ಮನಸಾಲಜಿ' ಚಿತ್ರದ ಬಳಿಕ ನಡೆದ ಕೆಲವು ಅಹಿತಕರ ಘಟನೆಗಳಿಂದ ನೊಂದಿದ್ದ ಅಮೂಲ್ಯ ಚಿತ್ರರಂಗಕ್ಕೆ ವಿದಾಯ ಹೇಳಿದ್ದರು. ಆಗ ಆ ರೀತಿ ಮನನೊಂದು ಹೇಳಿದ್ದೆ. ಇಷ್ಟಕ್ಕೂ ಆ ಮಾತನ್ನು ನಾನು ಹೇಳಿರಲಿಲ್ಲ. ನಮ್ಮ ಅಣ್ಣ ಹೇಳಿದ್ದರು ಎನ್ನುತ್ತಾರೆ. (ಏಜೆನ್ಸೀಸ್)