Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃತಿಚೌರ್ಯ ಆರೋಪಕ್ಕೆ ರಮೇಶ್ ತಿರುಗೇಟು
ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್, ನಾನು ಯಾರ ಕತೆಯನ್ನೂ ಕದ್ದಿಲ್ಲ. ಗುರುರಾಜ್ ಅವರನ್ನು ನಾನು ಇದುವರೆಗೂ ಭೇಟಿಯಾಗಿಲ್ಲ. ಅವರ ಕೃತಿಯನ್ನೂ ಓದಿಲ್ಲ. ವೀರಪ್ಪನ್ ಬಗ್ಗೆ ಈಗಾಗಲೆ ಹಲವಾರು ಜನ ಹಲವಾರು ಕೃತಿಗಳನ್ನು ಬರೆದಿದ್ದಾರೆ. ಅವರಿಗೆಲ್ಲಾ ಕ್ರೆಡಿಟ್ ಕೊಡುಲು ಸಾಧ್ಯವೆ? ಎಂದಿದ್ದಾರೆ.
ಮುಂದುವರೆದು, 2006ರಿಂದ ವೀರಪ್ಪನ್ ಬಗ್ಗೆ ನಾನು ಅಧ್ಯಯನ ಮಾಡುತ್ತಿದ್ದೇನೆ. ವೀರಪ್ಪನ್ ಜೊತೆಗೆ ಸಂಪರ್ಕವಿದ್ದವರನ್ನು ಸಂದರ್ಶಿಸಿದ್ದೇನೆ. ಇವೆಲ್ಲವನ್ನೂ ರೆಕಾರ್ಡ್ ಮಾಡಿಕೊಂಡಿರುವ ದಾಖಲೆಗಳು ನನ್ನ ಬಳಿ ಇವೆ ಎಂದು ತಿಳಿಸಿದ್ದಾರೆ.
ಆದರೆ ಪತ್ರಕರ್ತ ಗುರುರಾಜ್ ಅವರು ಮಾತ್ರ ತಮ್ಮ ಕೃತಿಯನ್ನು ಬಳಸಿಕೊಂಡಿದಕ್ಕೆ ಕೃತಜ್ಞತೆಗಳನ್ನು ತಿಳಿಸಲೇಬೇಕು ಹಾಗೂ ನನಗೆ ಬರಬೇಕಾಗಿರುವ ಗೌರವಧನ ಬರಲೇಬೇಕು ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಈ ಸಮಸ್ಯೆ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ.
ಈ ಹಿಂದೊಮ್ಮೆ ನಮ್ಮ ಅನುಮತಿ ಪಡೆಯದೆ ಚಿತ್ರವನ್ನು ಎ.ಎಂ.ಆರ್ ರಮೇಶ್ ತೆರೆಗೆ ತರುತ್ತಿದ್ದಾರೆ ಎಂದು 'ನಕ್ಕೀರನ್' ಪತ್ರಿಕೆಯ ಸಂಪಾದಕ ಆರ್ ಆರ್ ಗೋಪಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ 'ಅಟ್ಟಹಾಸ' ಚಿತ್ರ ಬಿಡುಗಡೆಗೆ ಕೋರ್ಟ್ ನಿರ್ಬಂಧ ಹೇರಿ ಬಳಿಕ ತೆರವುಗೊಳಿಸಿತ್ತು.
ಚಿತ್ರವೊಂದು ಇನ್ನೇನು ತೀರಾ ಬಿಡುಗಡೆ ಹಂತಕ್ಕೆ ಬಂದಾಗ ವಿವಾದಕ್ಕೀಡಾಗುವುದು ಕನ್ನಡ ಚಿತ್ರೋದ್ಯಮದಲ್ಲಿ ಇತ್ತೀಚೆಗೆ ಸಾಮಾನ್ಯ ಬೆಳವಣಿಗೆಯಾಗಿದೆ. ಪ್ರಚಾರಕ್ಕಾಗಿ ಹೀಗೆ ಮಾಡಲಾಗುತ್ತಿದೆಯೋ ಅಥವಾ ನಿಜವಾಗಿಯೂ ವಿವಾದ ಎದುರಾಗಿದೆಯೋ ಎಂಬುದು ಮಾತ ನಿಗೂಢವಾಗಿದೆ. (ಏಜೆನ್ಸೀಸ್)