Don't Miss!
- Automobiles ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಮೂಲ್ಯ-ಜಗದೀಶ್' ಆರತಕ್ಷತೆ: ಅಭಿಮಾನಿಗಳಿಗೆ 'ಫೇಸ್ ಬುಕ್' ಆಹ್ವಾನ
ಚಂದನವನದ ನಟಿ ಅಮೂಲ್ಯ ಮತ್ತು ಜಗದೀಶ್ ಅವರು ಕಳೆದ ಶುಕ್ರವಾರ (ಮೇ 12) ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ, ಕುಟುಂಬಸ್ಥರು, ಗುರು-ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನಂತರ ಮೇ 14 ರಂದು ಬೆಂಗಳೂರಿನ ಪಂಚತಾರ ಹೋಟೆಲ್ ನಲ್ಲಿ ಕನ್ನಡ ಚಿತ್ರರಂಗದ ತಾರೆಯರಿಗೆ ವಿಶೇಷವಾದ ಪಾರ್ಟಿ ಏರ್ಪಡಿಸಿದ್ದರು. ಈಗ ಅಮೂಲ್ಯ ಮತ್ತು ಜಗದೀಶ್ ಅವರ ಮದುವೆಯ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ತಮ್ಮ ಅಭಿಮಾನಿಗಳಿಗೆ ತುಂಬು ಹೃದಯದಿಂದ ಅಮೂಲ್ಯ ಹಾಗೂ ಜಗದೀಶ್ ಆಹ್ವಾನ ನೀಡಿದ್ದಾರೆ.
ಮದುವೆಯ ಬಳಿಕ ಮೊದಲ ಬಾರಿಗೆ ಫೇಸ್ ಬುಕ್ನಲ್ಲಿ ಲೈವ್ ನಲ್ಲಿ ಕಾಣಿಸಿಕೊಂಡ ಹೊಸ ಜೋಡಿ, ಮಂಗಳವಾರ (ಮೇ 16) ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ನಮ್ಮನ್ನ ಆಶೀರ್ವಾದಿಸಿ ಎಂದು ಅಭಿಮಾನಿಗಳಿಗೆ ಆಮಂತ್ರಣ ನೀಡಿದ್ದಾರೆ.
'ಬೆಂಗಳೂರಿನ ರಾಜರಾಜೇಶ್ವರಿ ನಗರದ ಶ್ರೀ ಸಮುದಾಯ ಭವನದಲ್ಲಿ ಆರತಕ್ಷತೆ ನಡೆಯಲಿದೆ. ದಯವಿಟ್ಟು ಉಡುಗೊರೆ ಏನೂ ತರಬೇಡಿ. ಖುಷಿಯಾಗಿ ಬಂದು ನಮಗೆ ಆಶೀರ್ವಾದ ಮಾಡಿದರೇ ಸಾಕು'' ಎಂದು ನವದಂಪತಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.