Don't Miss!
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- News Bengaluru Peripheral Ring Road: 73 ಕಿಲೋ ಮೀಟರ್ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದೇ ಕಂಪನಿ .!-ವೆಚ್ಚ ಎಷ್ಟು?
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆರಂಭ' ಚಿತ್ರದ ಟೀಸರ್ ನಲ್ಲಿ ಇದೇನಿದು 'ಆ' ದೃಶ್ಯ?
ಆರಂಭದಿಂದಲೂ ಸ್ಯಾಂಡಲ್ ವುಡ್ ನ ಗಮನಸೆಳೆಯುತ್ತಿರುವ ಚಿತ್ರ 'ಆರಂಭ'. ಇತ್ತೀಚೆಗೆ ಈ ಚಿತ್ರದ ಆಡಿಯೋವನ್ನು ಗೋವಾದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದಾರೆ ಚಿತ್ರದ ನಿರ್ದೇಶಕ ಎಸ್ ಹಬಿ ಹನಕೆರೆ. ಇದೀಗ ಯೂಟ್ಯೂಬ್ ನಲ್ಲಿ ಈ ಚಿತ್ರದ ಟೀಸರ್ ಭಾರಿ ಸದ್ದು ಮಾಡುತ್ತಿದೆ.
"ವಯಸ್ಸಿಗೆ ಬಂದ ಹುಡುಗಿಗೆ ಯಾರಾದರೂ ಬಂದು ನನ್ನ ಎದೆ ಮುಟ್ಟಲಿ ಎಂಬ ಆಸೆ ಇರುತ್ತದೆ" ಎಂಬ ಟೇಸರ್ ನಲ್ಲಿನ ಒಂದೇ ಒಂದು ಡೈಲಾಗ್ ಪಡ್ಡೆಗಳನ್ನು ನಕಶಿಖಾಂತ ರೊಚ್ಚಿಗೆಬ್ಬಿಸುವಂತಿದೆ. ಅದಕ್ಕೆ ತಕ್ಕಂತೆ ಚಿತ್ರದ ಟೀಸರ್ ಸಹ ಇರುವುದು ವಿಶೇಷ. [ಲಾಸ್ಟ್ ಛಾನ್ಸ್: ಆರಂಭ ಟೈಟಲ್ ಡಿಜೈನ್ ಸ್ಪರ್ಧೆ]
"ಅಹಂಕಾರದಿಂದಲ್ಲ ದುರಹಂಕಾರದಿಂದ ಹೇಳ್ತಿದ್ದೀನಿ...ಇಡೀ ಸಮಾಜದ ದಿಕ್ಕನ್ನೇ ಬದಲಾಯಿಸ್ತೀನಿ..."ಎಂಬ ಈ ಚಿತ್ರದ ಬಗೆಗಿನ ಇನ್ನೆರಡು ಸಾಲುಗಳು ಇದ್ಯಾವ ರೀತಿಯ ಚಿತ್ರ ಇರಬಹುದು ಎಂದು ಕುತೂಹಲ ಮೂಡಿವಂತೆ ಮಾಡಿದೆ. ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಡಿ. ಗಣೇಶ್ ವಿ ನಾಗೇನಹಳ್ಳಿ ನಿರ್ಮಿಸಿ ಎಸ್ ಅಭಿ ಹನಕೆರೆ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿದೆ.
ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಊರಾದ ಕಣಗಾಲ್ ನಲ್ಲಿ ಈ ಚಿತ್ರದ ಚಿತ್ರೀಕರಣ ನದೆದಿರುವುದು ಇನ್ನೊಂದು ವಿಶೇಷ. ಕಣಗಾಲ್ ನಲ್ಲಿ ಚಿತ್ರೀಕರಿಸಿರುವ ಮೊದಲ ಚಿತ್ರ ಎನ್ನುತ್ತಾರೆ ನಿರ್ದೇಶಕರು. ಈ ಚಿತ್ರದ ಪ್ರೀಮಿಯರ್ ಶೋ ಕಣಗಾಲ್ ನಲ್ಲಿ ಆಯೋಜಿಸಿ ಚಿತ್ರರಂಗದ ಗಣ್ಯರನ್ನು ಆಹ್ವಾನಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ ಅಭಿ ಹನಕೆರೆ.
ನಟ ಮಿಥುನ್ ಪ್ರಕಾಶ್, ಅಭಿರಾಮಿ ಸೇರಿದಂತೆ ಕಲಾವಿದರ ಬಳಗವೇ ಈ ಚಿತ್ರದಲ್ಲಿದೆ. ಗುರುಕಿರಣ್, ಗೋಟುರಿ, ಕವಿರಾಜ್, ಅಭಿ ಹನಕೆರೆ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ನಾಗರಾಜ್ ಛಾಯಾಗ್ರಹಣ, ಗಿರೀಶ್ ಸಂಕಲನ ಹಾಗೂ ಸಂದೀಪ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.