Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ 'ಅಂದರ್ ಬಾಹರ್' ಚಿತ್ರಕ್ಕೆ ಕತ್ತರಿ ಪ್ರಯೋಗ
ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಅವರ 'ಅಂದರ್ ಬಾಹರ್' ಚಿತ್ರಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಚಿತ್ರ ಎರಡು ಗಂಟೆ ನಲವತ್ತು ನಿಮಿಷಗಳಷ್ಟು ಸುದೀರ್ಘವಾಗಿರುವುದೇ ಇದಕ್ಕೆ ಕಾರಣ. ಹಾಗಾಗಿ ಹದಿನೆಂಟು ನಿಮಿಷಗಳಷ್ಟು ಮೊಟಕುಗೊಳಿಸಲಾಗಿದೆ ಎಂದಿದ್ದಾರೆ ನಿರ್ದೇಶಕರು.
ಈಗಾಗಲೆ ಹೊಸ ಆವೃತ್ತಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ನಿರ್ದೇಶಕ ಫಣೀಶ್ ಎಸ್ ರಾಮನಾಥಪುರ ಅವರು ಸಂಕಲನಕಾರ ಜೋ.ನಿ.ಹರ್ಷ ಅವರೊಂದಿಗೆ ಚರ್ಚಿಸಿ ಅನಗತ್ಯ ಎನ್ನಿಸುವ ಕೆಲವು ಸನ್ನಿವೇಶಗಳಿಗೆ ಕತ್ತರಿ ಹಾಕಿದ್ದಾರೆ. ಆದರೆ ಚಿತ್ರದ ಒಟ್ಟಾರೆ ಆಶಯಕ್ಕೆ ಎಲ್ಲೂ ಧಕೆಯಾಗಿಲ್ಲ ಎಂದಿದ್ದಾರೆ.
ಅಂದರ್ ಬಾಹರ್ ಚಿತ್ರದಲ್ಲಿ ಭೂಗತದ ನೆರಳಿದೆ. ಆದರೆ ಎಲ್ಲೂ ರಕ್ತಪಾತ ನಡೆಯಲ್ಲ. ಇದೇ ಸಬ್ಜೆಕ್ಟ್ ಮತ್ತಿನ್ಯಾರ ಕೈಗಾದರೂ ಸಿಕ್ಕಿದ್ದರೆ ಮತ್ತೊಂದು ಲಾಂಗು ಮಚ್ಚಿನ ಚಿತ್ರವಾಗುತ್ತಿತ್ತು. ಆದರೆ ನಿರ್ದೇಶಕ ಫಣೀಶ್ ಅವರು ಬಹಳ ಜಾಣ್ಮೆಯಿಂದ ಚಿತ್ರವನ್ನು ತೆರೆಗೆ ತಂದಿದ್ದಾರೆ. (ಅಂದರ್ ಬಾಹರ್ ಚಿತ್ರ ವಿಮರ್ಶೆ)
ಚಿತ್ರವನ್ನು ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ನಿರಾಸೆಯಾಗದಂತೆ, ಕಥೆಗೆ ಮೋಸ ಆಗದಂತೆ ತೆರೆಗೆ ತಂದಿದ್ದೇವೆ ಎನ್ನುತ್ತಾರೆ ನಿರ್ದೇಶಕ ಫಣೀಶ್. ಚಿತ್ರದ ನಾಯಕಿ ಪಾರ್ವತಿ ಮೆನನ್. ತಾರಾಬಳಗದಲ್ಲಿ ಶಶಿಕುಮಾರ್, ಶ್ರೀನಾಥ್, ಅರುಂಧತಿ ನಾಗ್, ಸೃಜನ್ ಲೋಕೇಶ್, ರಘು ರಾಮ್, ಜೋಶ್ವಾ ಮುಂತಾದವರಿದ್ದಾರೆ. (ಏಜೆನ್ಸೀಸ್)