Don't Miss!
- News Rain Alert: ಹುಬ್ಬಳ್ಳಿ-ಧಾರವಾಡ ಸೇರಿ ವಿವಿಧೆಡೆ ವ್ಯಾಪಕ ಮಳೆ ಆರ್ಭಟ
- Automobiles ಅತ್ಯಾಧುನಿಕ ಅಡಾಸ್ನೊಂದಿಗೆ ಬರಲಿದೆ ಈ ಕಿಯಾ ಕಾರು: ಟಾಟಾ ಪಂಚ್ಗೆ ಇನ್ನು ದೇವರೇ ಗತಿ!
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಓಂ ಪ್ರಕಾಶ್ ರಾವ್ ಚಿತ್ರದಲ್ಲಿ ಅನುಪಮ್ ಖೇರ್
ಬಾಲಿವುಡ್ ಚಿತ್ರರಂಗದ ಹೆಸರಾಂತ ನಟ ಅನುಪಮ್ ಖೇರ್ ಕನ್ನಡಕ್ಕೆ ಬರುವುದು ಬಹುತೇಕ ಗ್ಯಾರಂಟಿಯಾಗಿದೆ. ಈ ಹಿಂದೆ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನವನ್ನು ಹೇಮಂತ್ ಹೆಗಡೆ ಮಾಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಹೇಮಂತ್ ಅವರ 'ನಿಂಬೆ ಹುಳಿ' ಚಿತ್ರಕ್ಕೆ ಅನುಪಮ್ ಕಡೆಗೂ ಬರಲೇ ಇಲ್ಲ.
ಈಗ ಓಂ ಪ್ರಕಾಶ್ ರಾವ್ ಅವರು ತಮ್ಮ 'ಅಯ್ಯ' ಚಿತ್ರಕ್ಕೆ ಅನುಪಮ್ ಖೇರ್ ಅವರನ್ನು ಕರೆಸುತ್ತಿದ್ದಾರೆ. ಈಗಾಗಲೆ ಖೇರ್ ಜೊತೆ ಮಾತುಕತೆಯೂ ಆಗಿದೆಯಂತೆ. 'ಅಯ್ಯ' ಚಿತ್ರದಲ್ಲಿ ಅಭಿನಯಿಸುವ ಬಗ್ಗೆ ಅವರು ಒಪ್ಪಿಗೆಯನ್ನೂ ಕೊಟ್ಟಿದ್ದಾರೆ ಎನ್ನುತ್ತಾರೆ ಓಂ.
ಉತ್ತಮ ಆಡಳಿತಕ್ಕೆ ಹೆಸರಾದ ಅವರನ್ನು ಕೊಲ್ಲಲು ಪ್ಲಾನ್ ಮಾಡಲಾಗುತ್ತದೆ. ಅವರು ಕರ್ನಾಟಕಕ್ಕೆ ಬಂದಾಗ ಅವರನ್ನು ಮುಗಿಸಲು ಸ್ಕೆಚ್ ಹಾಕಲಾಗುತ್ತದೆ. ಆದರೆ ಅದು ಸಾಧ್ಯವಾಗುವುದಿಲ್ಲ. ಕಾರಣ ಕರ್ನಾಟಕದ ಸೂಪರ್ ಕಾಪ್ 'ಅಯ್ಯ'.
'ಅಯ್ಯ'ನ ಚಾಣಾಕ್ಷ ತನದಿಂದ ಕೇಂದ್ರ ಸಚಿವರು ಪಾರಾಗುತ್ತಾರೆ. ಅದೇನು ಎಂಬುದನ್ನು ತೆರೆಯ ಮೇಲೆ ನೋಡಿ ಎನ್ನುತ್ತಿದ್ದಾರೆ ಓಂ ಪ್ರಕಾಶ್ ರಾವ್. ಅ.23ರಿಂದ ಚಿತ್ರ ಆರಂಭವಾಗಲಿದ್ದು ನ.6ರ ತನಕ ಸತತ ಚಿತ್ರೀಕರಣ ನಡೆಯಲಿದೆ. (ಏಜೆನ್ಸೀಸ್)