Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕ್ಟೋಬರ್ ನಲ್ಲಿ ಅರ್ಜುನ್ ಸರ್ಜಾ 'ಅಭಿಮನ್ಯು'
ಆಕ್ಷನ್ ಹೀರೋ ಅರ್ಜುನ್ ಸರ್ಜಾ ಅವರು ನಟಿಸಿ, ನಿರ್ದೇಶಿಸಿ ಜೊತೆಗೆ ಕಥೆ ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ಮಾಣ ಮಾಡಿರುವ ಚಿತ್ರ 'ಅಭಿಮನ್ಯು' ಚಿತ್ರದ ಬಗ್ಗೆ ಅವರ ಅಭಿಮಾನಿಗಳು ಸಾಕಷ್ಟು ಕಾತುರರಾಗಿದ್ದಾರೆ. ಈ ಚಿತ್ರ ಇದೀಗ ಸಿದ್ಧವಾಗಿದ್ದು ಅಕ್ಟೋಬರ್ ನಲ್ಲಿ ತೆರೆಕಾಣುತ್ತಿದೆ.
ಇಷ್ಟಕ್ಕೂ ಅಭಿಮನ್ಯು ಚಿತ್ರದ ಕಥೆ ಏನೆಂದರೆ ಭಾರತೀಯ ಶಿಕ್ಷಣ ವ್ಯವಸ್ಥೆ. ಶಿಕ್ಷಣ ಎಂಬ ಚಕ್ರವ್ಯೂಹವನ್ನು ಈ ಅಭಿಮನ್ಯು ಹೇಗೆ ಭೇದಿಸುತ್ತಾನೆ ಎಂಬುದೇ ಚಿತ್ರದ ಕಥಾಹಂದರ. ಮಹಾಭಾರತದ ಅಭಿಮನ್ಯು ಗೆದ್ದಂತೆ ಇಲ್ಲಿನ ಅಭಿಮನ್ಯು ಸೋಲಲ್ಲ ಎನ್ನುತ್ತಾರೆ ಅರ್ಜುನ್ ಸರ್ಜಾ. [ಜೀ ಕನ್ನಡ ಟಿವಿ ಶೋನಲ್ಲಿ ಕಣ್ಣೀರಿಟ್ಟ ಅರ್ಜುನ್ ಸರ್ಜಾ]
ತಮ್ಮ ಚಿತ್ರಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರೇ ಸ್ಫೂರ್ತಿ ಎನ್ನುವ ಸರ್ಜಾ ಅವರು, ನಿಯತಕಾಲಿಕೆಯೊಂದರಲ್ಲಿ ಅವರು ಬರೆದಿದ್ದ ಲೇಖನವೇ ತಾವು ಈ ಚಿತ್ರ ಕೈಗೆತ್ತಿಕೊಳ್ಳಲು ಕಾರಣ ಎನ್ನುತ್ತಾರೆ. ನಮ್ಮ ಶಿಕ್ಷಣ ವ್ಯವಸ್ಥೆ ಬಗ್ಗೆ ಸಾಕಷ್ಟು ಅಧ್ಯಯನವನ್ನೂ ಮಾಡಿ ಕಥೆಗೆ ಒಂದು ಸುಂದರ ಚೌಕಟ್ಟು ಹಾಕಿದ್ದಾರೆ. ಬೆಳ್ಳಿ ತೆರೆಯ ಮೇಲೆ ಪ್ರತಿಯೊಬ್ಬ ಭಾರತೀಯ ನಾಗರೀಕನೂ ನೋಡಲೇ ಬೇಕಾದ ರಿಯಲಿಟಿ ಸಿನೆಮಾ ಇದು ಎನ್ನುತ್ತಾರೆ ಸರ್ಜಾ.
ಕೆ.ಕೆ ಸಂಕಲನ, ಶಶಿಧರ್ ಅಡಪ ಕಲಾನಿರ್ದೇಶನ, ರಾಜುಸುಂದರಂ ನೃತ್ಯ ನಿರ್ದೇಶನ ಹಾಗೂ ಶಿವಾರ್ಜುನ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅರ್ಜುನ್ ಸರ್ಜಾ, ಸುರ್ವಿನ್ ಚಾವ್ಲಾ, ರವಿಕಾಳೆ, ಸಿಮ್ರಾನ್ ಕಪೂರ್, ರಾಹುಲ್ ದೇವ್, ಬಿರಾದಾರ್, ಜಹಂಗೀರ್, ವಿನಯಾಪ್ರಸಾದ್, ಸತೀಶ್ ಮುಂತಾದವರಿದ್ದಾರೆ. (ಫಿಲ್ಮಿಬೀಟ್ ಕನ್ನಡ)