Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಗಣೇಶನ ಆಟೋರಾಜ ಕದ್ದ ಮಾಲಂತೆ
ಇತ್ತೀಚೆಗೆ ಬಿಡುಗಡೆಯಾದ ಗೋಲ್ಡನ್ ಸ್ಟಾರ್ ಗಣೇಶ್ ಮುಖ್ಯ ಭೂಮಿಕೆಯಲ್ಲಿರುವ 'ಆಟೋರಾಜ' ಚಿತ್ರದ ಕಥೆ ಕದ್ದಮಾಲು ಎನ್ನುವ ದೂರು ಫಿಲಂ ಚೇಂಬರಿನಲ್ಲಿ ದಾಖಲಾಗಿದೆ.
ಆಟೋ ಚಾಲಕ ಮತ್ತು ಪಾರ್ಟ್ ಟೈಂ ರೇಡಿಯೋ ಜಾಕಿಯಾಗಿರುವ ಶಿವಕುಮಾರ್ ಎನ್ನುವವರು ಚಲನಚಿತ್ರ ಮಂಡಳಿಯಲ್ಲಿ ಈ ಸಂಬಂಧ ಲಿಖಿತ ದೂರು ನೀಡಿದ್ದಾರೆ.
ಸುಮಾರು ಇಪ್ಪತ್ತು ವರ್ಷದಿಂದ ಆಟೋಚಾಲಕರಾಗಿರುವ ಶಿವಕುಮಾರ್, 2010ರಿಂದ FM station ನಲ್ಲೂ ಜಾಕಿಯಾಗಿ ಕೂಡಾ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ತನ್ನ ಸಾಮಾಜಿಕ ಕಳಕಳಿಯ ಕೆಲಸಗಳಿಂದ ಹಲವು ದಿನಪತ್ರಿಕೆಗಳು ಇವರ ಬಗ್ಗೆ ಲೇಖನಗಳನ್ನು ಬರೆದಿದ್ದವು.
ಕವಿ ಕೂಡಾ ಆಗಿರುವ ಶಿವಕುಮಾರ್ ತನ್ನ ಪ್ರಾಮಾಣಿಕ ಕೆಲಸಗಳಿಂದ ಸುಮಾರು ಐದು ಬಾರಿ ಪೋಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ ಕೂಡಾ ಪಡೆದಿದ್ದರು.
ತನ್ನ ಜೀವನದ ಬಗ್ಗೆ ಸ್ಕ್ರಿಪ್ಟ್ ಬರೆದಿದ್ದು ಸೂಕ್ತ ನಿರ್ಮಾಪಕರನ್ನು ಹುಡುಕುತ್ತಿದ್ದೆ. ನನ್ನ ಕೆಲವು ಗೆಳೆಯರಿಗೆ ಸ್ಕ್ರಿಪ್ಟ್ ಅನ್ನು ವಿವರಿಸಿದ್ದೆ. ಇವರಲ್ಲಿ ಯಾರೋ ಒಬ್ಬರು ಆಟೋರಾಜ ಚಿತ್ರದ ನಿರ್ದೇಶಕರಾದ ಉದಯ್ ಪ್ರಕಾಶ್ ಅವರಿಗೆ ಕಥೆಯನ್ನು ಬಹಿರಂಗ ಪಡಿಸಿದ್ದಾರೆ.
ಹಾಗಾಗಿ ಬೇರೆ ವಿಧಿಯಿಲ್ಲದೆ ಚಲನಚಿತ್ರ ಮಂಡಳಿಗೆ ದೂರು ನೀಡಿದ್ದೇನೆ ಎಂದು ಶಿವಕುಮಾರ್ ತನ್ನ ಅಳಲು ವ್ಯಕ್ತ ಪಡಿಸಿದ್ದಾರೆ. ಚಲನಚಿತ್ರ ಮಂಡಳಿ ಈ ಸಂಬಂಧ ಆಟೋರಾಜ ಚಿತ್ರದ ನಿರ್ದೇಶಕ ಉದಯ್ ಪ್ರಕಾಶ್ ಅವರ ಬಳಿ ವಿವರಣೆ ಕೇಳುವ ಸಾಧ್ಯತೆಯಿದೆ.