Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಡಿಯೂರಪ್ಪ' ಚಿತ್ರದ ಕುತೂಹಲಕ್ಕೆ ತೆರೆ ಎಳೆದ ಮಾಜಿ ಸಿಎಂ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಸಿನಿಮಾ ಬರಲಿದೆ ಎಂದು ದೊಡ್ಡ ಸುದ್ದಿಯಾಗಿತ್ತು. ಅಲ್ಲದೆ ಈ ಸಿನಿಮಾದಲ್ಲಿ ನಟ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ ಅಂತ ನಿನ್ನೆಯಿಂದ ಸಿಕ್ಕಾಪಟ್ಟೆ ಟಾಕ್ ಶುರುವಾಗಿತ್ತು. ಈಗ ಈ ಚಿತ್ರದ ಬಗ್ಗೆ ಸ್ವತಃ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.
ಯಡಿಯೂರಪ್ಪ ತಮ್ಮ ಜೀವನದ ಬಗ್ಗೆ ಸಿನಿಮಾ ಬರುವ ವಿಷಯದ ಬಗ್ಗೆ ತಮ್ಮ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಅವರು-ಇವರು ಹೇಳುತ್ತಿದ್ದ ಕಥೆಗಳಿಗೆ ಬ್ರೇಕ್ ಬಿದ್ದಿದೆ. ಅಷ್ಟಕ್ಕೂ, ಯಡಿಯೂರಪ್ಪ ಅವರು ಏನ್ ಹೇಳಿದ್ರು? ಸಿನಿಮಾ ಬರುತ್ತಾ ಅಥವಾ ಇಲ್ವೋ? ಮುಂದೆ ಓದಿ...
ನನ್ನ ಗಮನಕ್ಕೆ ಬಂದಿದೆ
''ನನ್ನ ಬಗ್ಗೆ ಸಿನಿಮಾ ಬರಲಿದೆ ಎನ್ನುವ ಸುದ್ದಿ ಕೆಲ ದಿನಗಳಿಂದ ಹರಿದಾಡುತ್ತಿದ್ದು, ಈ ವಿಷಯ ನನ್ನ ಗಮನಕ್ಕೆ ಬಂದಿದೆ.'' - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಒತ್ತಾಯ ಮಾಡುತ್ತಿದ್ದಾರೆ
''ನಿಮ್ಮ ಬಗ್ಗೆ ಸಿನಿಮಾ ಮಾಡಲು ಅವಕಾಶ ಕೊಡಿ ಅಂತ ಈಗಾಗಲೇ ಕೆಲವರು ನನ್ನ ಬಳಿ ಬಂದು ಒತ್ತಾಯ ಮಾಡಿದ್ದಾರೆ.'' - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ.
ಸಿನಿಮಾದ ಅಗತ್ಯ ಇಲ್ಲ
''ನನ್ನ ಬಗ್ಗೆ ಸಿನಿಮಾ ಬರುವ ಅಗತ್ಯ ನನಗೆ ಇಲ್ಲ. ಅಲ್ಲದೆ ಸಿನಿಮಾದ ಬಗ್ಗೆ ನನಗೆ ಆಸಕ್ತಿಯೂ ಇಲ್ಲ.'' - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ.
ಒಪ್ಪಿಗೆ ಕೊಡುವುದಿಲ್ಲ
''ನನ್ನ ಬಗ್ಗೆ ಸಿನಿಮಾ ಮಾಡುವುದಕ್ಕೆ ಯಾರಿಗೂ ಒಪ್ಪಿಗೆ ಕೊಡುವುದಿಲ್ಲ. ಅಲ್ಲದೆ ಈಗ ನಾವು ಚುನಾವಣೆಯ ತಯಾರಿಯಲ್ಲಿ ಇದ್ದೇವೆ.'' - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ.
ನಿರ್ದೇಶಕರ ಮಾತು
ನಿರ್ದೇಶಕ ಎಂ.ಎಸ್.ರಮೇಶ್ ಈ ಚಿತ್ರದ ಬಗ್ಗೆ ಹಬ್ಬಿದ್ದು 'ಸುಳ್ಳು ಸುದ್ದಿ' ಅಂತ 'ಫಿಲ್ಮಿ ಬೀಟ್ ಕನ್ನಡ'ದ ಜೊತೆ ಮಾತನಾಡಿ ತಿಳಿಸಿದ್ದರು.
ಗಾಸಿಪ್ ಅಷ್ಟೇ
ಈ ಮೂಲಕ ಯಡಿಯೂರಪ್ಪ ಅವರ ಬಗ್ಗೆ ಸಿನಿಮಾ ಬರಲಿದೆ ಎಂಬ ಸುದ್ದಿ ಕೇವಲ ಗಾಸಿಪ್ ಅಷ್ಟೇ. ನಿರ್ದೇಶಕ ಎಂ.ಎಸ್.ರಮೇಶ್ ಮತ್ತು ಯಡಿಯೂರಪ್ಪ ಇಬ್ಬರು ಈ ಸುದ್ದಿಗೆ ಸ್ಪಷ್ಟನೆ ಕೊಟ್ಟಿದ್ದು, ಇಲ್ಲಿಗೆ ಇದು ಮುಗಿದ ಅಧ್ಯಾಯ.