Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಾಹುಬಲಿ' ಚಿತ್ರಕ್ಕಿಂತ 'ಬಾಹುಬಲಿ-2' ಸೂಪರ್ ಆಗಿದ್ಯಂತೆ.! ಹೇಳಿದವರ್ಯಾರು ಗೊತ್ತೇ.?
ಇಡೀ ಭಾರತದಲ್ಲಿ ಬಹು ನಿರೀಕ್ಷೆ ಮೂಡಿಸಿರುವ 'ಬಾಹುಬಲಿ-2' ಚಿತ್ರ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಕರ್ನಾಟಕದಲ್ಲಿ 'ಬಾಹುಬಲಿ-2' ರಿಲೀಸ್ ಗೆ ಇದ್ದ ಅಡೆ-ತಡೆಗಳೆಲ್ಲವೂ ನಿವಾರಣೆ ಆಗಿದೆ. 'ಬಾಹುಬಲಿ-2' ಚಿತ್ರವನ್ನ ಕಣ್ತುಂಬಿಕೊಳ್ಳಲು ತೆಲುಗು ಸಿನಿ ಪ್ರಿಯರು ತುದಿಗಾಲಿನಲ್ಲಿ ನಿಂತಿದ್ದಾರೆ.[ಕರ್ನಾಟಕದಲ್ಲಿ 'ಬಾಹುಬಲಿ 2' ಬಿಡುಗಡೆ, ಬಂದ್ ವಾಪಸ್: ವಾಟಾಳ್ ನಾಗರಾಜ್ ಸ್ಪಷ್ಟನೆ]
ಎಲ್ಲರೂ ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿರುವ 'ಬಾಹುಬಲಿ-2' ಹೇಗಿರಬಹುದು.? ಈ ಪ್ರಶ್ನೆಗೆ ಒಬ್ಬರು ಉತ್ತರ ಕೊಟ್ಟಿದ್ದಾರೆ. ಅದರಲ್ಲೂ ಅವರು ಸೆನ್ಸಾರ್ ಮಂಡಳಿಯ ಸದಸ್ಯರು ಎನ್ನುವುದು ಇಂಟ್ರೆಸ್ಟಿಂಗ್ ವಿಷಯ.!
'ಬಾಹುಬಲಿ-2' ಸಿನಿಮಾ ಸೂಪರ್ ಆಗಿದ್ಯಂತೆ.!
'ಬಾಹುಬಲಿ' ಚಿತ್ರಕ್ಕಿಂತ 'ಬಾಹುಬಲಿ-2' ಸಿನಿಮಾ ಸೂಪರ್ ಆಗಿದ್ಯಂತೆ. ಹಾಗಂತ ಹೇಳಿರುವವರು ಬೇರೆ ಯಾರೂ ಅಲ್ಲ. ಸೌತ್ ಏಷಿಯನ್ ಸಿನಿಮಾ ಮ್ಯಾಗಝೀನ್ (ಯುಎಇ, ಯು.ಕೆ, ಭಾರತ) ವಿಮರ್ಶಕ ಹಾಗೂ ಸೆನ್ಸಾರ್ ಮಂಡಳಿ ಸದಸ್ಯ ಉಮೈರ್ ಸಂಧು.[ಕೊನೆಗೂ 'ಕಟ್ಟಪ್ಪ'ನನ್ನ ಕ್ಷಮಿಸಿದ ಕರುನಾಡು]
ಟ್ವೀಟ್ ಮಾಡಿದ್ದಾರೆ ಉಮೈರ್ ಸಂಧು
''ಬಾಹುಬಲಿ' ಚಿತ್ರಕ್ಕಿಂತ 'ಬಾಹುಬಲಿ-2' 100% ಉತ್ತಮವಾಗಿದೆ. ಬಲ್ಲ ಮೂಲಗಳ ಪ್ರಕಾರ, 'ಬಾಹುಬಲಿ-2' ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ. ಟಾಲಿವುಡ್ ಮತ್ತು ಪ್ರಭಾಸ್ ಫ್ಯಾನ್ಸ್ ಸಂಭ್ರಮಿಸಲು ಅಡ್ಡಿಯಿಲ್ಲ'' ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ.
ಮೊಟ್ಟ ಮೊದಲ ವಿಮರ್ಶೆ ಕೊಡ್ತಾರಂತೆ.!
ಬಾಹುಬಲಿ-2' ಚಿತ್ರದ ಎಕ್ಸ್ ಕ್ಲೂಸಿವ್ ವಿಮರ್ಶೆಯನ್ನ ಬುಧವಾರವೇ ಪ್ರಕಟಿಸುವುದಾಗಿ ಉಮೈರ್ ಸಂಧು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಏಪ್ರಿಲ್ 28ಕ್ಕೆ ಬಿಡುಗಡೆ
ಏಪ್ರಿಲ್ 28 ರಂದು ಬಹುನಿರೀಕ್ಷಿತ 'ಬಾಹುಬಲಿ-2' ಚಿತ್ರ ಬಿಡುಗಡೆ ಆಗಲಿದೆ. ಎಸ್.ಎಸ್.ರಾಜಮೌಳಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ಪ್ರಭಾಸ್, ಅನುಷ್ಕಾ ಶೆಟ್ಟಿ, ರಮ್ಯಾ ಕೃಷ್ಣ, ರಾಣಾ ದಗ್ಗುಬಾಟಿ ಮುಂತಾದವರು ನಟಿಸಿದ್ದಾರೆ.