Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತಾರಾಷ್ಟ್ರೀಯ ಸಿನಿಮಾ ಹಬ್ಬಕ್ಕೆ ಬೆಂಗಳೂರು ಸಜ್ಜು
ಆರನೇ ಅಂತಾರಾಷ್ಟ್ರೀಯ ಚಲನ ಚಿತ್ರೋತವಕ್ಕೆ ಬೆಂಗಳೂರಿನಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಇದೇ ಡಿಸೆಂಬರ್ 26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಸಂಜೆ 5.30 ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇರಾಕ್ ದೇಶದ ಖರ್ಜನ್ ಖಾದರ್ ನಿರ್ದೇಶನದ 'ಬೇಕಾಸ್' ಚಿತ್ರದ ಮೂಲಕ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಖ್ಯಾತ ನಟ ಕಮಲ್ ಹಾಸನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಾರ್ತಾ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಕೆ.ಆರ್.ನಿರಂಜನ್ ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಕನ್ನಡ ಚಿತ್ರೋದ್ಯಮ ಇಅದಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್ ಡಿ ಗಂಗರಾಜು ಈ ಸಂದರ್ಭದಲ್ಲಿ ತಿಳಿಸಿದರು.
ಉದ್ಘಾಟನಾ ದಿನ ಡಿಸೆಂಬರ್ 26 ರಂದು ಚಿತ್ರೋದ್ಯಮಕ್ಕೆ ರಜೆ ಘೋಷಿಸಲಾಗಿದೆ. ಅಂದು ಕನ್ನಡ ಚಿತ್ರ ರಂಗದ ಕಲಾವಿದರು, ತಂತ್ರಜ್ಞರು ಭಾಗಿಯಾಗಲಿದ್ದಾರೆ ಎಂದು ಗಂಗರಾಜು ತಿಳಿಸಿದ್ದಾರೆ.
ವಾರ್ತಾ ಇಲಾಖೆಯ ಕಾರ್ಯದರ್ಶಿ ನಿರಂಜನ್ ಮಾತನಾಡಿ, ಡಿಸೆಂಬರ್ 26 ರಂದು ಪ್ರಾದೇಶಿಕ ಚಿತ್ರಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಚಾರವಾಗಿ ಚರ್ಚೆ ನಡೆಯಲಿದೆ. ಡಿಸೆಂಬರ್ 29 ರಂದು ಡಿಜಿಟಲ್ ಕ್ಯಾಮೆರಾಗಳ ಕುರಿತು ವಿಚಾರಸಂಕಿರಣ ನಡೆಯಲಿದೆ. ಡಿಸೆಂಬರ್ 30 ರಂದು ಶಬ್ಧಗ್ರಹಣ ಕುರಿತು ವಿಚಾರಸಂಕಿರಣ ನಡೆಯಲಿದೆ ಎಂದು ತಿಳಿಸಿದರು.
ಜನವರಿ 2 ರಂದು ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯಪಾಲ ಎಚಾರ್ ಭಾರದ್ವಾಜ್ ಅವರು ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಆಸ್ಟ್ರೇಲಿಯಾದ ನಿರ್ದೇಶಕ ಕಿಮ್ ಮೋರ್ದಂ ಅವರ 'ದಿ ರಾಕೆಟ್' ಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ಏಕಕಾಲಕ್ಕೆ ಏಳು ಪರದೆಗಳ ಮೇಲೆ ಈ ಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ಕಲಾತ್ಮಕ ಚಿತ್ರಗಳ ನಿರ್ದೇಶಕ ಎಚ್ ಎನ್ ನರಹರಿ ರಾವ್ ತಿಳಿಸಿದರು. (ಏಜೆನ್ಸೀಸ್)