Don't Miss!
- News Mandya: ಏಪ್ರಿಲ್ 24 ರಿಂದ 26ರ ವರೆಗೆ ಮಂಡ್ಯದಲ್ಲಿ ಪ್ರತಿಬಂಧಕಾಜ್ಞೆ ಜಾರಿ
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಗಾರದ ಮನುಷ್ಯ ನಿರ್ಮಾಪಕ ಕೆಸಿಎನ್ ಗೌಡ ನಿಧನ
ಕೆಸಿಎನ್ ಗೌಡ ಅವರು 300ಕ್ಕೂ ಹೆಚ್ಚು ಚಿತ್ರಗಳ ವಿತರಕರಾಗಿ ಕೆಲಸ ಮಾಡಿದ್ದಾರೆ. ಫಾಲ್ಕೆ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಡಾ.ರಾಜ್ ಕುಮಾರ್ ಪ್ರಶಸ್ತಿಗೂ ಪಾತ್ರರಾಗಿದ್ದರು. ಗೌಡರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.
ವೃತ್ತಿಯಿಂದ ರೇಷ್ಮೆ ವ್ಯಾಪಾರಿಗಳಾದ ಕೆಸಿಎನ್ ಅವರದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ದಬಳ್ಳಾಪುರ ತಾಲೂಕಿನ ಕೊನೆಹಳ್ಳಿಯವರು. 'ಭಲೇ ಜೋಡಿ' ಚಿತ್ರ ಕೆಸಿಎನ್ ಗೌಡ ಅವರ ಚೊಚ್ಚಲ ಚಿತ್ರ. ರಾಜ್ ಕಮಲ್ ಆರ್ಟ್ಸ್ ಲಾಂಛನದಲ್ಲಿ ನಿರ್ಮಿಸಿದ ಈ ಚಿತ್ರದಲ್ಲಿ ಅಣ್ಣಾವು ದ್ವಿಪಾತ್ರಾಭಿನಯ ಮಾಡಿದ್ದರು.
ಬೆಂಗಳೂರಿನ ನವರಂಗ್ ಹಾಗೂ ಊರ್ವಶಿ ಚಿತ್ರಮಂದಿರಗಳ ಮಾಲೀಕರು ಕೂಡ. ಕೆಸಿಎನ್ ಗೌಡ ಅವರ ಮಕ್ಕಳಾದ ಕೆಸಿಎನ್ ಚಂದ್ರಶೇಖರ್ ಹಾಗೂ ಕೆಸಿಎನ್ ಮೋಹನ್ ಸಹ ಚಿತ್ರನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ.
ವರನಟ ಡಾ.ರಾಜ್ ಕುಮಾರ್ ಅವರ ಸತ್ಯಹರಿಶ್ಚಂದ್ರ, ಕಸ್ತೂರಿ ನಿವಾಸ, ಕವಿರತ್ನ ಕಾಳಿದಾಸ, ಬಬ್ರುವಾಹನ ಹಾಗೂ ವೀರಕೇಸರಿ ಕಪ್ಪುಬಿಳುಪು ಚಿತ್ರಗಳನ್ನು ಕಲರ್ ಸ್ಕೋಪ್ ನಲ್ಲಿ ಬಿಡುಗಡೆ ಮಾಡಿದ ಖ್ಯಾತಿ ಕೆಸಿಎನ್ ಗೌಡ ಅವರದು. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. (ಒನ್ಇಂಡಿಯಾ ಕನ್ನಡ)