Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು: 'ಬೆಳ್ಳಿ ಸಿನಿಮಾ- ಬೆಳ್ಳಿ ಮಾತು' ಟಿ.ಎಸ್ ನಾಗಾಭರಣ ಅತಿಥಿ
ಧೀಮಂತ ಚಿತ್ರೋದ್ಯಮಿ, ರಂಗಕರ್ಮಿ, ಸೃಜನಶೀಲ ಆಡಳಿತಗಾರ ಆಗಿರುವ 'ಬೆಳ್ಳಿ ಹೆಜ್ಜೆ' ರೂವಾರಿ ರಾಜ್ಯ ಚಲನಚಿತ್ರ ಅಕಾಡೆಮಿ ಪ್ರಥಮ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಧಮ್ಯ ಕನಸುಗಳಿಗೆ ರೆಕ್ಕೆ ಮೂಡಿದ್ದು, 'ಬೆಳ್ಳಿ ಹೆಜ್ಜೆ' ಕಾರ್ಯಕ್ರಮದಿಂದ. ಇದೀಗ ಮೈಸೂರಿನಲ್ಲಿ 'ಬೆಳ್ಳಿ ಹೆಜ್ಜೆ' ಕಾರ್ಯಕ್ರಮ ನಡೆಯುತ್ತಿದ್ದು, ನಾಗಾಭರಣ ಅವರ ನೆನಪುಗಳಿಗೊಂದು ಸುಂದರ ಸರಮಾಲೆಯಾಗಲಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಇದೀಗ ಆರನೇ ವರ್ಷಕ್ಕೆ ಕಾಲಿಡುತ್ತಿದೆ. ಇಷ್ಷು ಕಡಿಮೆ ಅವಧಿಯಲ್ಲಿ ಅಕಾಡೆಮಿಯು ಎಲ್ಲೆಡೆ ತನ್ನ ದಿಟ್ಟ ಹೆಜ್ಜೆಗಳನ್ನು ಮೂಡಿಸುತ್ತಾ ಬಂದಿದೆ.[ಕನ್ನಡ ಚಿತ್ರರಂಗದ ಏಳಿಗೆ ಬಗ್ಗೆ ಗಿರೀಶ್ ಕಾಸರವಳ್ಳಿ ಮಾತು]
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅತೀ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ 'ಬೆಳ್ಳಿ ಹೆಜ್ಜೆ' ಹಿರಿಯರ, ಸಾಧಕರ, ನಟರ, ಗಾಯಕರ ಮಧುರ ನೆನಪುಗಳ ಮೆರವಣಿಗೆಯಾಗಿದೆ.[ವಿಷಾದದೊಂದಿಗೆ ಫೇಸ್ ಬುಕ್ಕಿಗೆ ಜಗ್ಗೇಶ್ ಗುಡ್ ಬೈ]
ಇದೀಗ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು ಜಿಲ್ಲಾ ಕಛೇರಿ ಇವರ ಸಹಯೋಗದಲ್ಲಿ ಆಗಸ್ಟ್ 7ರಂದು ಸಂಜೆ 4 ಗಂಟೆಗೆ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಮಾನಸಗಂಗೋತ್ರಿ ರಾಣಿ ಬಹದ್ದೂರು ಸಭಾಂಗಣದಲ್ಲಿ 'ಬೆಳ್ಳಿ ಹೆಜ್ಜೆ' ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.['ಬೆಳ್ಳಿ ಸಿನೆಮಾ-ಬೆಳ್ಳಿ ಮಾತು' ಸಿನಿ ರಸಿಕರೊಡನೆ ಸಂವಾದ]
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವ ಶ್ರೀ ವಿ.ಶ್ರೀನಿವಾಸ ಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಹಕಾರ ಮತ್ತು ಸಕ್ಕರೆ ಸಚಿವ ಶ್ರೀ ಹೆಚ್.ಎಸ್.ಮಹದೇವಪ್ರಸಾದ್ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವಿ.ರಾಜೇಂದ್ರಸಿಂಗ್ ಬಾಬು ವಹಿಸಿಕೊಳ್ಳಲಿದ್ದಾರೆ.[ಜುಲೈ 25 ರಂದು 'ಡಿಸೆಂಬರ್ 1' ಚಿತ್ರ ಪ್ರದರ್ಶನ ಸಂವಾದ]
ಕೇವಲ ಬೆಂಗಳೂರಿನಲ್ಲಿ ಮಾತ್ರ ಮೂಡಿದ 'ಬೆಳ್ಳಿ ಹೆಜ್ಜೆ'ಗಳು ಬೇರೆ ಕಡೆಯಲ್ಲೂ ಪಸರಿಸುವ ನಿಟ್ಟಿನಲ್ಲಿ ಮೈಸೂರಿನ ಹೆಮ್ಮೆಯ ಕೊಡುಗೆ ನಾಗಾಭರಣ ಅವರ ಅನುಭವಗಳ ಧಾರೆಯಲ್ಲಿ ಈ ಬಾರಿ ಮೈಸೂರಿನಲ್ಲಿ 'ಬೆಳ್ಳಿ ಹೆಜ್ಜೆ' ಮೂಡಲಿದೆ ಎಂದು ಸಬ್ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ತಿಳಿಸಿದ್ದಾರೆ.