Don't Miss!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿ ಸಿನಿಮಾದಲ್ಲಿ 'ರಂಗಿತರಂಗ' ತಂಡದ ಬೆಳ್ಳಿ ಮಾತು
ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಪ್ರತಿ ಶನಿವಾರ ಹಮ್ಮಿಕೊಳ್ಳುವ 'ಬೆಳ್ಳಿ ಸಿನಿಮಾ-ಬೆಳ್ಳಿಮಾತು ಕಾರ್ಯಕ್ರಮದಲ್ಲಿ ಈ ಶನಿವಾರ ಹೊಸಬರ 'ರಂಗಿತರಂಗ' ಸೌಂಡ್ ಮಾಡಲಿದೆ.
ನವ ನಿರ್ದೇಶಕ ಅನುಪ್ ಭಂಡಾರಿ ಆಕ್ಷನ್-ಕಟ್ ಹೇಳಿರುವ ಹೊಸಬರ 'ರಂಗಿತರಂಗ' ಭರ್ಜರಿ 200ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂಭ್ರಮದಲ್ಲಿ ಈ ಸಿನಿಮಾ ಬೆಳ್ಳಿ ಮಾತು ಕಾರ್ಯಕ್ರಮಕ್ಕೆ ಈ ಬಾರಿ ಆಯ್ಕೆ ಆಗಿದೆ.[ಚಿತ್ರಗಳು: ಬೆಳ್ಳಿ ಹೆಜ್ಜೆಯಲ್ಲಿ ಡಾ.ಶಿವಣ್ಣನ ಮನದಾಳದ ಮಾತು]
ಅಂದಹಾಗೆ ಡಿಸೆಂಬರ್ 26 ರಂದು ಶನಿವಾರ ಸಂಜೆ 4.00 ಘಂಟೆಗೆ ಬೆಂಗಳೂರಿನ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ನಡೆಸುವ 'ಬೆಳ್ಳಿ ಸಿನಿಮಾ-ಬೆಳ್ಳಿಮಾತು' ಕಾರ್ಯಕ್ರಮದಲ್ಲಿ 'ರಂಗಿತರಂಗ' ಚಿತ್ರ ಪ್ರದರ್ಶನಗೊಳ್ಳಲಿದೆ.[ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಅಜ್ಜ ಆದಾಗ..!]
ಈ ವಾರದ ಬೆಳ್ಳಿ ಮಾತನ್ನು 'ರಂಗಿತರಂಗ' ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುಧಾಕರ್ ಭಂಡಾರಿ ಅವರು ನಡೆಸಿಕೊಡಲಿದ್ದಾರೆ. ಚಿತ್ರದ ನಾಯಕ ನಟ ನಿರೂಪ್ ಭಂಡಾರಿ, ನಾಯಕ ನಟಿ ರಾಧಿಕಾ ಚೇತನ್, ಚಿತ್ರದ ನಿರ್ಮಾಪಕ ಹೆಚ್. ಕೆ. ಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.