Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರಗೂರು ರಾಮಚಂದ್ರಪ್ಪ ಹಿರಿಮೆಗೆ ಮತ್ತೊಂದು ಗರಿ
'ಜನುಮದ ಜೋಡಿ', 'ಹಗಲುವೇಷ' ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಿಗೆ 'ಅತ್ತ್ಯುತ್ತಮ ಗೀತ ಸಾಹಿತಿ', 'ಅತ್ತ್ಯುತ್ತಮ ಸಂಭಾಷಣೆಕಾರ' ಪ್ರಶಸ್ತಿಗಳನ್ನ ಪಡೆದಿರುವ ಖ್ಯಾತ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ರವರ ಹಿರಿಮೆಗೆ ಮತ್ತೊಂದು ಗರಿ ಸಿಕ್ಕಿದೆ.
ಇತ್ತೀಚೆಗಷ್ಟೆ ರಾಜಸ್ಥಾನದ ಜೈಪುರದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಿತು. ಅದರಲ್ಲಿ ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಮರಣದಂಡನೆ' ಚಿತ್ರ ಸ್ಪರ್ಧಾವಿಭಾಗಕ್ಕೆ ಆಯ್ಕೆ ಆಯ್ತು. ಇದೇ ಚಿತ್ರದ ನಿರ್ದೇಶನಕ್ಕಾಗಿ ಬರಗೂರು ರಾಮಚಂದ್ರಪ್ಪ 'ಪ್ರಾದೇಶಿಕ ಚಿತ್ರಗಳ ಅತ್ತ್ಯುತ್ತಮ ನಿರ್ದೇಶಕ' ಪ್ರಶಸ್ತಿಯನ್ನ ಪಡೆದಿದ್ದಾರೆ.
'ಮರಣದಂಡನೆ' ಚಿತ್ರದ ಕುರಿತು - ಸಹಿಷ್ಣುತೆ ಮತ್ತು ಸಾವಿನ ಸಮಸ್ಯೆಯನ್ನು ಶೋಧಿಸುವ ಸಿನಿಮಾ 'ಮರಣದಂಡನೆ'. ಕಾರಾಗೃಹದಲ್ಲಿ ಗಲ್ಲಿಗೇರಿಸುವ ಕೆಲಸ ಮಾಡುತ್ತಿದ್ದ ಹುಸೇನ್, ತಾನೇ ಗಲ್ಲಿಗೇರಬೇಕಾದ ಸಂದರ್ಭ ಒದಗಿ ಬಂದಾಗ ಎದುರಿಸುವ ತಲ್ಲಣ ಚಿತ್ರದ ಹೂರಣ.
'ಮರಣದಂಡನೆ' ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ, ನಿರ್ದೇಶನ ಮಾಡಿದವರು ಬರಗೂರು ರಾಮಚಂದ್ರಪ್ಪ. ಚಿತ್ರಕ್ಕೆ ಮುರುಳೀಧರ ಹಾಲಪ್ಪ ಬಂಡವಾಳ ಹಾಕಿದ್ರೆ, ಹಂಸಲೇಖ ಸಂಗೀತ ಸಂಯೋಜಿಸಿದ್ದಾರೆ.