Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಿಳೆಯರಿಗೆ ಬಾಗಿನ ನೀಡಿದ 'ಭಾಗೀರತಿ' ಭಾವನಾ
ಹರ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಹಳ ಅದ್ದೂರಿಯಾಗಿ ನಿರ್ಮಾಪಕ ಶ್ರೀನಿವಾಸ್ 'ಭಾಗೀರತಿ'ಯನ್ನು ಬಿಡುಗಡೆ ಮಾಡಿದರು. ಕಲಾತ್ಮಕ ಚಿತ್ರಗಳ ಬಿಡುಗಡೆ ಸರಳವಾಗಾಗುತ್ತದೆ ಎಂಬ ಮಾತು ಈ ಚಿತ್ರದಿಂದ ದೂರವಾಗಿದೆ.
ಚಿತ್ರ ಬಿಡುಗಡೆಯ ಮಧ್ಯಾಹ್ನದ ಪ್ರದರ್ಶನಕ್ಕೆ ಬಂದ ಮಹಿಳೆಯರಿಗೆ ಬಾಗಿನ ನೀಡಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. 'ಭಾಗೀರತಿ' ಪಾತ್ರಧಾರಿ ಭಾವನಾ, ವತ್ಸಲಾಮೋಹನ್, ನಿರ್ದೇಶಕ ಬರಗೂರು ರಾಮಚಂದ್ರಪ್ಪನವರ ಶ್ರೀಮತಿಯವರು ಮಹಿಳೆಯರಿಗೆ ಬಾಗಿನ ನೀಡಿದರು.
ಬರಗೂರು ರಾಮಚಂದ್ರಪ್ಪ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಮನೋಹರ್ ಸಂಗೀತ ನೀಡಿದ್ದಾರೆ. ಚಿತ್ರದ ಹಾಡುಗಳನ್ನು ನಿರ್ದೇಶಕರೇ ಬರೆದಿದ್ದಾರೆ. ಹರೀಶ್ ಎನ್ ಸೊಂಡೇಕೊಪ್ಪರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರೇಶ್ಅರಸ್ ಸಂಕಲನಕಾರರಾಗಿದ್ದಾರೆ.
ಕಿಶೋರ್, ಭಾವನಾ, ಶ್ರೀನಾಥ್, ಹೇಮಚೌಧರಿ, ತಾರಾ, ಶಿವಧ್ವಜ್, ರವಿಶಂಕರ್, ಪದ್ಮಾವಾಸಂತಿ, ವತ್ಸಲಾಮೋಹನ್, ರಾಧಾರಾಮಚಂದ್ರ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜನಪದ ಕತೆಯ ಮೂಲ ಆಶಯಗಳಿಗೆ ಧಕ್ಕೆ ಬರದಂತೆ ಚಿತ್ರಕ್ಕೆ ಸಿನಿಮಾ ರೂಪ ನೀಡಿರುವಲ್ಲಿ ಬರಗೂರರ ಪ್ರೌಢಿಮೆ ಎದ್ದು ಕಾಣುತ್ತದೆ.
ಕೇವಲ ಐದು ಪುಟಗಳ ಕಥನಗೀತೆಯನ್ನಿಟ್ಟುಕೊಂಡು ಸಿನಿಮಾ ಮಾಡಿರುವುದು ನಿಜಕ್ಕೂ ಸುಲಭದ ಕೆಲಸವಲ್ಲ. ಹಾಗಂತ ಚಿತ್ರದಲ್ಲಿ ನಿಧಾನಗತಿಯ ಶೈಲಿ ಇಲ್ಲ. ಜನರನ್ನು ತಲುಪುವ ಜನಪ್ರಿಯ ಶೈಲಿಯನ್ನೇ ಬರಗೂರು ಇಲ್ಲಿ ಬಳಸಿಕೊಂಡಿದ್ದಾರೆ.
ರಾಜ್ಯದ ಒಂದೇ ಒಂದು ಚಿತ್ರಮಂದಿರದಲ್ಲಿ ಕೂಡಾ ಬಿಡುಗಡೆಯಾಗದೆ ಅತ್ಯುತ್ತಮ ಚಿತ್ರ ಅಂತೆಲ್ಲ ಹೆಸರು ಗಳಿಸಿದ ಚಿತ್ರಗಳಿವೆ. ಜನರ ವೀಕ್ಷಣೆಗೇ ಸಿಕ್ಕದಿದ್ದರೂ, ಅವು ಅತ್ಯುತ್ತಮ ಚಿತ್ರ ಆಗುವ ವಿಪರ್ಯಾಸ ಹೇಗೆಂದು ಇವತ್ತಿಗೂ ನಿಗೂಢ. ಪುಣ್ಯಕ್ಕೆ ಶ್ರೀನಿವಾಸ್ ಆ ಕೆಟಗರಿಗೆ ಸೇರಿಲ್ಲ.
'ಭಾಗಿರತಿ' ನಿರ್ದೇಶಕ ಬರಗೂರು ರಾಮಚಂದ್ರಪ್ಪನವರಿಗೇ ದಿಗ್ಭ್ರಮೆಯಾಗುವಂತೆ ಅವರು ಇದರ ಪ್ರಚಾರ ಹಾಗು ಬಿಡುಗಡೆಗೆ ಹಣ- ಶ್ರಮ ಖರ್ಚು ಮಾಡುತ್ತಿದ್ದಾರೆ. ಹಾಗಾಗಿ ಜೂನ್ ಎಂಟನೆ ತಾರೀಖು ಭಾಗಿರತಿಯನ್ನ ಆಸಕ್ತ ಪ್ರೇಕ್ಷಕರು ನೋಡಿ ಕಣ್ತುಂಬಿಕೊಳ್ಳಬಹುದು. (ಒನ್ಇಂಡಿಯಾ ಕನ್ನಡ)