Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇ ತಿಂಗಳಲ್ಲಿ ಪ್ರೇಕ್ಷಕರ ಬಾಯಿಗೆ 'ಬಾಂಬೆ ಮಿಠಾಯಿ'
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ 'ಬಾಂಬೆ ಮಿಠಾಯಿ' ಚಿತ್ರ ಇಷ್ಟೊತ್ತಿಗೆ ತೆರೆಗೆ ಬರಬೇಕಾಗಿತ್ತು. ಹೋಗ್ಲಿ ಏಪ್ರಿಲ್ ತಿಂಗಳಲ್ಲಾದರೂ ತೆರೆಗೆ ಬರುತ್ತಾ ಅಂದ್ರೆ ಅದೂ ಇಲ್ಲ. ಇನ್ನೂ ಸೆನ್ಸಾರ್ ಆಗಿಲ್ಲ ಅನ್ನುತ್ತಿದೆ ಚಿತ್ರತಂಡ.
ಒಂದು ವೇಳೆ ಏಪ್ರಿಲ್ ನಲ್ಲಿ ಸೆನ್ಸಾರ್ ಆದರೂ 'ಬಾಂಬೆ ಮಿಠಾಯಿ' ತೆರೆಗೆ ಬರಲು ಹಿಂದೇಟು ಹಾಕುತ್ತಿದೆ. ಇದಕ್ಕೆ ಕಾರಣವಾಗಿರುವುದು ಎರಡು ಬಿಗ್ ಬಜೆಟ್ ಸಿನಿಮಾಗಳು. ಒಂದು ಪವರ್ ಸ್ಟಾರ್ ಪುನೀತ್ ಅವರ 'ರಣವಿಕ್ರಮ' ಹಾಗೂ ಇನ್ನೊಂದು ಕಿಚ್ಚ ಸುದೀಪ್ ಅವರ 'ರನ್ನ'. [ಪೂನಂ ಪಾಂಡೆ ಅಲ್ಲ ಈ 'ಬಾಂಬೆ ಮಿಠಾಯಿ']
ಇವೆರಡೂ ಚಿತ್ರಗಳ ಬಳಿಕ ಬಾಂಬೆ ಮಿಠಾಯಿ ತಿನ್ನಿಸ್ತೀವಿ ಎನ್ನುತ್ತಿದೆ ಚಿತ್ರತಂಡ. ಸ್ವಲ್ಪ ತಡವಾದರೂ ಪರ್ವಾಗಿಲ್ಲ ಮೇ ತಿಂಗಳಲ್ಲಿ ಪ್ರೇಕ್ಷಕರ ಬಾಯಿಗೆ ಖಂಡಿತ 'ಬಾಂಬೆ ಮಿಠಾಯಿ' ಹಾಕ್ತೀವಿ ಎನ್ನುತ್ತಾರೆ ನಿರ್ದೇಶಕ ಚಂದ್ರಮೋಹನ್.
ಈ ಚಿತ್ರ ಪ್ರೇಕ್ಷಕರನ್ನು ಖಂಡಿತ ನಿರಾಸೆಗೊಳಿಲ್ಲ. ಅವರ ನೀರೀಕ್ಷೆಗಳನ್ನು ಹುಸಿ ಮಾಡಲ್ಲ. ಬಿಗ್ ಬಜೆಟ್ ಚಿತ್ರಗಳ ಜೊತೆಗೆ ನಮ್ಮ ಚಿತ್ರವನ್ನೂ ರಿಲೀಸ್ ಮಾಡಿದರೆ 'ಮಿಠಾಯಿ' ರುಚಿ ಸಿಗದೇ ಹೋಗಬಹುದು. ಹಾಗಾಗಿ ಸ್ವಲ್ಪ ತಡವಾಗಿ ತೆರೆಗೆ ತರುತ್ತಿದ್ದೇವೆ ಎನ್ನುತ್ತಾರೆ ನಿರ್ದೇಶಕರು.
ಚಿತ್ರದಲ್ಲಿ ಏಳು ಪ್ರಮುಖ ಪಾತ್ರಗಳು ಬರುತ್ತವೆ. ಆ ಪಾತ್ರಗಳು ಕಾಮನಬಿಲ್ಲಿನ ಏಳು ಬಣ್ಣಗಳನ್ನು ಸಂಕೇತಿಸುತ್ತವೆ. ಮೂವರು ಹುಡುಗರು, ಒಬ್ಬ ಹುಡುಗಿ ಒಂದೇ ಕಾರಿನಲ್ಲಿ ಪ್ರಕಾಣಿಸಬೇಕಾದರೆ ಅನುಭವಿಸುವ ಪತೀಜಿ ಪ್ರಸಂಗಗಳು ಪ್ರೇಕ್ಷಕರಿಗೆ ಮಜಾ ಕೊಡುತ್ತವೆ.
ಈ ಚಿತ್ರದ ಮಿಠಾಯಿ ಎಂದರೆ ಮುಂಬೈ ಬೆಡಗಿ ದಿಶಾ ಪಾಂಡೆ. ವೀರ್ ಸಮರ್ಥ್ ಅವರ ಸಂಗೀತ ಇರುವ ಚಿತ್ರದಲ್ಲಿ ನಿರಂಜನ್ ದೇಶಪಾಂಡೆ, ವಿಕ್ರಮ್, ಚಿಕ್ಕಣ್ಣ, ಬುಲೆಟ್ ಪ್ರಕಾಶ್ ಮತ್ತು ಕಿಶೋರಿ ಬಲ್ಲಾಳ್ ಇದ್ದಾರೆ. ಸೌಧ ಷರೀಫ್ ಮತ್ತು ಆಮೀರ್ ಷರೀಫ್ ಚಿತ್ರದ ನಿರ್ಮಾಪಕರು.