Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ದರ್ಶನ್ ಜೊತೆ 'ಬುಲ್ ಬುಲ್' ಬೆಡಗಿ ರೋಮ್ಯಾನ್ಸ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಪರಭಾಷಾ ನಟಿ ದೀಕ್ಷಾ ಸೇಠ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ 'ಜಗ್ಗುದಾದ' ಶೂಟಿಂಗ್ ಭರದಿಂದ ಸಾಗುತ್ತಿದ್ದು, ಮುಂದಿನ 6 ದಿನಗಳವರೆಗೆ ಗೋವಾದಲ್ಲಿ ಚಿತ್ರೀಕರಣ ನಡೆಸುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.
ಈಗಾಗಲೇ ಚಿತ್ರದ ಕ್ಲೈಮ್ಯಾಕ್ಸ್ ಸೇರಿದಂತೆ ಮಾತಿನ ಭಾಗ ಬಹುತೇಕ ಸಂಪೂರ್ಣಗೊಂಡಿದ್ದು ಹಾಡುಗಳ ಚಿತ್ರೀಕರಣ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಗೋವಾದಲ್ಲಿ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದ್ದು, ಸ್ಪೇನ್ ನಲ್ಲಿ ಉಳಿದ ಹಾಡುಗಳ ಚಿತ್ರೀಕರಣ ನಡೆಯಲಿದೆ.['ಉತ್ತಮ ವಿಲನ್'ಗಳಿಗೆ ದರ್ಶನ್-ಸೃಜನ್ ನಮನ]
ಅಂದಹಾಗೆ 'ಬುಲ್ ಬುಲ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಅವರು ದರ್ಶನ್ ಅವರ ಜೊತೆ ಮತ್ತೊಮ್ಮೆ ಮಿಂಚಲಿದ್ದು, 'ಜಗ್ಗುದಾದ' ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಮಿಂಚಲಿದ್ದಾರೆ. ಅನ್ನೋದು ಈ ಚಿತ್ರದ ಮತ್ತೊಂದು ವಿಶೇಷತೆ.[ಚೇತರಿಸಿಕೊಂಡ ದರ್ಶನ್, ಮತ್ತೆ 'ಜಗ್ಗುದಾದ' ಅಡ್ಡಾದಲ್ಲಿ ಹಾಜರ್.!]
ನಟಿ ರಚಿತಾ ರಾಮ್ ಅವರನ್ನು 'ಬುಲ್ ಬುಲ್' ಚಿತ್ರದ ಲಕ್ಕಿ ನಾಯಕಿ ಎಂದೇ ಪರಿಗಣಿಸಿದ್ದರು. ತದನಂತರ ದರ್ಶನ್ ಅವರ ಜೊತೆ 'ಅಂಬರೀಶ' ಚಿತ್ರದಲ್ಲೂ ಮಿಂಚಿದ್ದರು. ಆದ್ದರಿಂದ ಇದೀಗ ಮತ್ತೆ 'ಜಗ್ಗುದಾದ' ಸಿನಿಮಾದಲ್ಲಿ ದರ್ಶನ್ ಅವರ ಮತ್ತೊಮ್ಮೆ ಅತಿಥಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಇವರ ಜೊತೆ 'ಪೊರ್ಕಿ' ಖ್ಯಾತಿಯ ನಟಿ ಪ್ರಣಿತಾ ಅವರು ಕೂಡ ಅತಿಥಿ ಪಾತ್ರ ವಹಿಸಿದ್ದಾರೆ.[ದರ್ಶನ್ ಗೆ ಜೋಡಿಯಾದ ಮಿರ್ಚಿ 'ಮೆಣಸಿನಕಾಯಿ' ದೀಕ್ಷಾ]
ಇನ್ನುಳಿದಂತೆ ಚಿತ್ರದಲ್ಲಿ ಸೃಜನ್ ಲೋಕೇಶ್, ಗಾಯತ್ರಿ ಅಯ್ಯರ್, ವಿಶಾಲ್ ಹೆಗ್ಡೆ, ವಿಷ್ಣು ಮತ್ತು ಯುವ ಮುಂತಾದವರು ಪ್ರಮುಖ ತಾರಾಗಣದಲ್ಲಿ ಮಿಂಚುತ್ತಿದ್ದಾರೆ.
ಇನ್ನು ದರ್ಶನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾ ರಿಲೀಸ್ ಮಾಡುವ ಯೋಜನೆಯನ್ನು ನಿರ್ದೇಶಕ ರಾಘವೇಂದ್ರ ಹೆಗಡೆ ಅವರು ಹಾಕಿಕೊಂಡಿದ್ದು, ಮಾರ್ಚ್ 10 ರೊಳಗೆ ಚಿತ್ರೀಕರಣ ಮುಗಿಸಲು ನಿರ್ಧರಿಸಿದ್ದಾರೆ.