Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆತ್ತನಗೆರೆ ಚಿತ್ರದ ವಿರುದ್ಧ ಕೇಸು ದಾಖಲು
ಭೂಗತ ಜಗತ್ತಿನ ಕಥಾಹಂದರದ 'ಬೆತ್ತನಗೆರೆ' ಚಿತ್ರಕ್ಕೆ ದುತ್ತನೆ ವಿಘ್ನವೊಂದು ಎದುರಾಗಿದೆ. ಈ ಚಿತ್ರದ ಶೂಟಿಂಗನ್ನು ತಡೆಯಬೇಕು ಎಂದು ಬೆತ್ತನಗೆರೆ ಸೀನನ ತಾಯಿ ಕೋರ್ಟ್ ಮೆಟ್ಟಿಲೇರಿದ್ದಾರೆ. ತನ್ನ ಮಗನ ಜೀವನಕ್ಕೆ ಸಂಬಂಧಿಸಿದ ಕಥೆಯನ್ನು ಮೂಲವಾಗಿರಿಸಿಕೊಂಡು ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಪೊಲೀಸರ
ಗುಂಡಿನ
ದಾಳಿಯಲ್ಲಿ
ಹತನಾದ
ರೌಡಿ
ಶೀಟರ್
ಬೆತ್ತನಗೆರೆ
ಸೀನನ
ಕುರಿತಾದ
ಕಥೆ
ಇದು
ಎನ್ನಲಾಗಿದ್ದು,
ಸುಮಂತ್
ಶೈಲೇಂದ್ರ
ಹಾಗೂ
ಅಕ್ಷಯ್
ಮುಖ್ಯಭೂಮಿಕೆಯಲ್ಲಿದ್ದಾರೆ.
ಆರಂಭದಲ್ಲಿ
ಈ
ಚಿತ್ರದ
ಟೈಟಲ್
ಗಾಗಿ
ಸಾಕಷ್ಟು
ಕಿತ್ತಾಗಳೇ
ನಡೆದಿದ್ದವು.
ಅಶ್ವಿನಿ ಆಡಿಯೋದ ಅಶ್ವಿನಿ ರಾಮ್ ಪ್ರಸಾದ್ ಸೇರಿದಂತೆ ಆರೇಳು ನಿರ್ಮಾಪಕರು ಈ ಒಂದೇ ಟೈಟಲ್ ಗೆ ಮುಗಿಬಿದ್ದಿದ್ರು. ಚಿತ್ರದಲ್ಲಿ ಪ್ರಮುಖ ಆಕರ್ಷಣೆಯಾಗಿ ಕಾಂಬ್ಳಿ ಅವರ ಪಾತ್ರ ನಿಲ್ಲಲಿದೆ ಎನ್ನುತ್ತದೆ ಚಿತ್ರತಂಡ. ಚಿತ್ರದಲ್ಲಿ ಅವರದು ಪ್ರಮುಖ ಪಾತ್ರ ಎನ್ನಲಾಗಿದೆ.
ಈ ಚಿತ್ರದ ನಿರ್ದೇಶಕರು ಬೆತ್ತೆನೆಗೆರೆ ಸ್ಥಳದ ವ್ಯಕ್ತಿ ಮೋಹನ್ ಗೌಡ ಬಿ.ಜಿ. 'ಬೆತ್ತೆನೆಗೆರೆ' ಸಿನಮಾಗೆ ಕಥೆ ಬರೆದು, ಚಿತ್ರಕಥೆ, ಸಂಭಾಷಣೆ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. 'ಬೆತ್ತನಗೆರೆ' ಚಿತ್ರದ ಅಡಿಬರಹ 'ಎ ರಾ ಸ್ಟೋರಿ!' ಕ್ರೈಂ ಲೋಕದಲ್ಲಿ ತಿಳಿದ ವ್ಯಕ್ತಿ ಬೆತ್ತೆನೆಗೆರೆ ಸೀನ.
ಸೀನನ ಸಹೋದರ ಮೋಹನ್ ಅವರೇ ಸಿನೆಮಾ ನಿರ್ದೇಶನದ ಜೊತೆಗೆ ಒಳಗಿನ ಕೆಲವು ಮನಮಿಡಿಯುಯ ಅಂಶಗಳನ್ನು ಹೇಳಲು ಹೊರಟಿದ್ದಾರೆ. ಇನ್ನು ಕಾಂಬ್ಳಿ ಅವರ ವಿಚಾರಕ್ಕೆ ಬಂದರೆ ದಕ್ಷಿಣ ಭಾರತದಲ್ಲಿ ಅವರು ಅಭಿನಯಿಸುತ್ತಿರುವ ಮೊದಲ ಚಿತ್ರ ಇದಾಗಿದೆ. ಹಿಂದಿಯಲ್ಲಿ ಅನರ್ಥ್ ಹಾಗೂ ಪಲ್ ಪಲ್ ದಿಲ್ ಕೆ ಸಾಥ್ ಎಂಬ ಎರಡು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. (ಏಜೆನ್ಸೀಸ್)