Don't Miss!
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- News ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ, ಕಾರಣ ಏನು?
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ತಮಿಳು ಚಿತ್ರ ಪ್ರದರ್ಶನ ರದ್ದು: ಪೋಸ್ಟರ್ ಗಳಿಗೆ ಬೆಂಕಿ
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದಾಗಿ ಕರ್ನಾಟಕದಾದ್ಯಂತ ಹೋರಾಟದ ಕಿಚ್ಚು 'ಕಾವೇರಿ'ದೆ.
ಮುಂದಿನ ಹತ್ತು ದಿನಗಳ ಅವಧಿಯಲ್ಲಿ ಪ್ರತಿದಿನ 15 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿವೆ.
ಹೊಸೂರು ಬಳಿ ತಮಿಳುನಾಡು ವಾಹನಗಳು ಕನ್ನಡ ಪರ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದರೆ, ಇನ್ನೊಂದೆಡೆ ತಮಿಳು ಚಿತ್ರ ಪ್ರದರ್ಶನಕ್ಕೆ ಕರವೇ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ. [ಕಾವೇರಿ ವಿವಾದ : ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್]
ಇಂದು ಬೆಳಗ್ಗೆ ಬೆಂಗಳೂರಿನ ನಟರಾಜ ಚಿತ್ರಮಂದಿರದಲ್ಲಿ 'ಕಿದಾರಿ' ಸಿನಿಮಾ ಪ್ರದರ್ಶನ ಆಗುತ್ತಿತ್ತು. ಇದರಿಂದ ಆಕ್ರೋಶಗೊಂಡ ಪ್ರವೀಶ್ ಶೆಟ್ಟಿ ಬಳಗದ ಕರವೇ ಕಾರ್ಯಕರ್ತರು ನಟರಾಜ ಥಿಯೇಟರ್ ಗೆ ಮುತ್ತಿಗೆ ಹಾಕಿದರು.
ಇನ್ನೂ ಬೆಂಗಳೂರಿನ ಆರ್.ಟಿ.ನಗರದ ಪುಷ್ಪಾಂಜಲಿ ಮತ್ತು ವಿನಾಯಕ ಚಿತ್ರಮಂದಿರಗಳಿಗೂ ನುಗ್ಗಿ ತಮಿಳು ಚಿತ್ರಗಳ ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿದರು. [ಕಾವೇರಿ ತೀರ್ಪು ಖಂಡಿಸಿ ರಕ್ಷಣಾ ವೇದಿಕೆಯಿಂದ ಪಂಜಿನ ಮೆರವಣಿಗೆ]
ಎಲ್ಲೆಡೆ ಹೋರಾಟದ ಕಾವು ಹೆಚ್ಚಾಗಿರುವುದರಿಂದ ತಮಿಳು ಚಿತ್ರ ಪ್ರದರ್ಶನ ಮಾಡುವ ಬಹುತೇಕ ಎಲ್ಲಾ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿದೆ. ಇನ್ನೆರಡು ದಿನ ಕರ್ನಾಟಕದ ಹಲವೆಡೆ ತಮಿಳು ಚಿತ್ರ ಪ್ರದರ್ಶನವಾಗುವುದು ಅನುಮಾನ.