Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ಗಲಭೆ : ಕನ್ನಡ ಸಿನಿ ತಾರೆಯರ 'ಶಾಂತಿ' ಸಂದೇಶ
ಕಾವೇರಿ ನದಿ-ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ರಾಜ್ಯಕ್ಕೆ ಪ್ರತಿ ಬಾರಿ ಅನ್ಯಾಯ ಆಗುತ್ತಿರುವುದನ್ನು ವಿರೋಧಿಸಿ ಕಳೆದ ಒಂದು ವಾರದಿಂದ ರಾಜ್ಯದ ಎಲ್ಲೆಡೆ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿತ್ತು.
ಆದ್ರೆ, ನಿನ್ನೆ (ಸೆಪ್ಟೆಂಬರ್ 12) ತಮಿಳು ನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವ ವಿಡಿಯೋ ಎಲ್ಲಾ ನ್ಯೂಸ್ ಚಾನೆಲ್ ಗಳಲ್ಲಿ ಬಿತ್ತರವಾದ ಕೂಡಲೆ ಬೆಂಗಳೂರು, ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಿತು. [ಆಯಮ್ಮನ ಹೆದರಿಸುವ ಗಂಡಸು ಕರ್ನಾಟಕದಲ್ಲಿ ಹುಟ್ಟಿಲ್ವಾ?]
ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ತಮಿಳುನಾಡು ರಿಜಿಸ್ಟ್ರೇಷನ್ ಇರುವ ವಾಹನಗಳಿಗೆ ಬೆಂಕಿ ಇಡಲಾಯಿತು. ಹತ್ತಾರು ಲಾರಿಗಳು ಸುಟ್ಟು ಭಸ್ಮವಾದವು. ಎಲ್ಲೆಡೆ ಅಘೋಷಿತ ಬಂದ್ ವಾತಾವರಣ ನಿರ್ಮಾಣ ಆಯ್ತು. [ತಿರುಗಿಯೂ ನೋಡದ ಅಂಬಿ, ಪದ್ಮಾವತಿಯೂ ನಾಪತ್ತೆ!]
ಬೆಂಗಳೂರಿನಲ್ಲಿ ಸೋಮವಾರ ಆದ ಗಲಭೆ ಕುರಿತು ಕನ್ನಡ ಸಿನಿ ತಾರೆಯರು ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ಶಾಂತಿ ಕಾಪಾಡಬೇಕು ಅಂತ ಕಿಚ್ಚ ಸುದೀಪ್, ರಮೇಶ್ ಅರವಿಂದ್, ಗಣೇಶ್, ದರ್ಶನ್ ಸೇರಿದಂತೆ ಹಲವು ತಾರೆಯರು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ. [ಕಾವೇರಿ ಹೋರಾಟದ ಬಗ್ಗೆ ತುಟ್ಟಿ ಬಿಚ್ಚಿದ 'ಅಣ್ತಮ್ಮ' ಯಶ್]
ಶಾಂತಿ ಸಂದೇಶ ನೀಡಿರುವ ಸುದೀಪ್
''ಈಗ ಡ್ಯಾಮೇಜ್ ಆಗುತ್ತಿರುವುದು ನಮ್ಮ ರಾಜ್ಯದ ಶಾಂತಿ. ಹೌದು, ನ್ಯಾಯ ನಮಗೆ ಸಿಗಬೇಕು. ಅದನ್ನ ಪಡೆಯಲು ಖಂಡಿತ ಒಳ್ಳೆಯ ದಾರಿ ಇದೆ. ಶಾಂತಿ ಕಾಪಾಡಿ'' ಅಂತ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
ಪ್ರಚೋದನೆ ಮಾಡ್ಬೇಡಿ ಪ್ಲೀಸ್...
''ಪರಿಸ್ಥಿತಿ ಕೊಂಚ ಶಾಂತವಾಗಬೇಕು. ದಯವಿಟ್ಟು ಪ್ರಚೋದನಕಾರಿ ಟ್ವೀಟ್ ಮಾಡಬೇಡಿ ಅಂತ ಎಲ್ಲರಲ್ಲೂ ಕೋರಿಕೊಳ್ಳುತ್ತೇನೆ'' - ಕಿಚ್ಚ ಸುದೀಪ್
ಪ್ರಿಯಾ ಸುದೀಪ್ ಕೂಡ ಟ್ವೀಟ್ ಮಾಡಿದ್ದಾರೆ
''ಕಾನೂನು ಪ್ರಕಾರವಾಗಿ, ನ್ಯಾಯಕ್ಕಾಗಿ ನಾವು ಸುಪ್ರೀಂ ಕೋರ್ಟ್ ಗೆ ಮೊರೆಹೋದ್ವಿ. ನಮ್ಮ ರೈತರೇ ಸಂಕಷ್ಟದಲ್ಲಿ ಸಿಲುಕಿರುವಾಗ, ತಮಿಳುನಾಡಿಗೆ ನೀರು ಬಿಡುವ ಆತುರ ಬೇಕಿಲ್ಲ. ಪ್ರಧಾನ ಮಂತ್ರಿಗಳು ಈ ಕೂಡಲೇ ಮಧ್ಯ ಪ್ರವೇಶಿಸಬೇಕು'' ಅಂತ ಪ್ರಿಯಾ ಸುದೀಪ್ ಟ್ವೀಟ್ ಮಾಡಿದ್ದಾರೆ.
ರಮೇಶ್ ಅರವಿಂದ್ ರಿಂದ ವಿಡಿಯೋ ಸಂದೇಶ
ಒಂದು ಕ್ಷಣದ ಕೋಪ ಹಾಗೂ ಹಿಂಸಾಚಾರದಿಂದ ಏನೂ ಪ್ರಯೋಜನ ಆಗುವುದಿಲ್ಲ ಅಂತ ನಟ, ನಿರ್ದೇಶಕ ರಮೇಶ್ ಅರವಿಂದ್ ನೀಡಿರುವ ವಿಡಿಯೋ ಸಂದೇಶ ಇಲ್ಲಿದೆ ನೋಡಿ....
ಮನಸ್ಸಿಗೆ ಘಾಸಿ ಆಗಿದೆ ಎಂದ ಗಣೇಶ್
ಹಿಂಸೆಯಿಂದ ಏನೂ ಪರಿಹಾರ ಸಿಗುವುದಿಲ್ಲ. ಈ ಹಿಂಸಾಚಾರದಿಂದ ಮನಸ್ಸಿಗೆ ಘಾಸಿ ಆಗಿದೆ. ಅಂತ ನಟ ಗೋಲ್ಡನ್ ಸ್ಟಾರ್ ಗಣೇಶ್ ನೀಡಿರುವ ವಿಡಿಯೋ ಸಂದೇಶ ಇಲ್ಲಿದೆ ನೋಡಿ....
ದರ್ಶನ್ ಕೂಡ ಟ್ವೀಟ್ ಮಾಡಿದ್ದಾರೆ
''ಕನ್ನಡಿಗರು ಶಾಂತಿ ಪ್ರಿಯರು. ಕನ್ನಡಿಗರಿಗೆ ಯಾವುದೇ ತೊಂದರೆ ಆಗ್ಬಾರದು'' ಅಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಟ್ವೀಟ್ ಮಾಡಿದ್ದಾರೆ.
ಪ್ರಚೋದನೆ ಮಾಡ್ಬೇಡಿ ಎಂದ ಜಗ್ಗೇಶ್
ಯಾವುದೇ ಕಾರಣಕ್ಕೂ ಪ್ರಚೋದನಕಾರಿ ಟ್ವೀಟ್ ಮಾಡ್ಬೇಡಿ ಅಂತ ಯುವಜನರಲ್ಲಿ ನಟ ಜಗ್ಗೇಶ್ ಮನವಿ ಮಾಡಿದ್ದಾರೆ.