Don't Miss!
- Automobiles ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ವಿವಾದ:ಕನ್ನಡ ಚಿತ್ರರಂಗಕ್ಕೆ ಸದ್ಯಕ್ಕೆ ಜಯ
ಕನ್ನಡ ಗ್ರಾಹಕರ ಒಕ್ಕೂಟ ಮತ್ತು ಗಣೇಶ್ ಚೇತನ್ ಎನ್ನುವವರು ಕನ್ನಡದಲ್ಲಿ ಡಬ್ಬಿಂಗ್ ನಿಷೇಧವಿರುವ ಬಗ್ಗೆ ಕೆಲವು ತಿಂಗಳ ಹಿಂದೆ ಸಿಸಿಐಗೆ ( Competition Commission of India) ದೂರು ನೀಡಿದ್ದರು.
ಇದರ ವಿಚಾರಣೆ ನಡೆಸುತ್ತಿರುವ ಸಿಸಿಐ ಡಬ್ಬಿಂಗ್ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಸಮಿತಿಯ ಸಭೆಯಲ್ಲಿ ಡಬ್ಬಿಂಗ್ ಪರ ಅಥವಾ ವಿರುದ್ಧ ಯಾವುದೇ ತೀರ್ಮಾನ ತೆಗೆದುಕೊಳ್ಳದೆ, ಮಧ್ಯಂತರ ಆದೇಶ ನೀಡುವ ಅಗತ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದೆ.
ನವದೆಹಲಿಯಲ್ಲಿ ನಡೆದ ಸಿಸಿಐ ಸಮಿತಿ ಸಭೆಯಲ್ಲಿ ಅರ್ಜಿದಾರರ ಮನವಿ ಹೊರತಾಗಿಯೂ ಮಧ್ಯಂತರ ತೀರ್ಪು ನೀಡಲು ಆಯೋಗ ನಿರಾಕರಿಸಿದೆ.
ಡಬ್ಬಿಂಗಿಗೆ ಕನ್ನಡ ಚಿತ್ರರಂಗ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ದೂರಿನ ಅನ್ವಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಆರು ಸಂಘ ಸಂಸ್ಥೆಗಳಿಗೆ ಸಿಸಿಐ ನೋಟಿಸ್ ಜಾರಿ ಮಾಡಿ, ದೂರಿನ ವಿಚಾರಣೆಗೆ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯಲ್ಲಿ ಒಬ್ಬ ಅಧ್ಯಕ್ಷ ಹಾಗೂ ಐವರು ಸದಸ್ಯರಿದ್ದಾರೆ.
ಸಮಿತಿಯಲ್ಲಿದ್ದ ಒಬ್ಬ ಸದಸ್ಯ (ಎಸ್ ಎನ್ ದಿಂಗ್ರಾ) ಈ ಕೂಡಲೇ ಡಬ್ಬಿಂಗ್ ನಿಷೇಧ ಹಿಂದಕ್ಕೆ ಪಡೆಯಬೇಕು, ಬೇರೆ ಭಾಷೆಯ ಚಿತ್ರ, ಧಾರವಾಹಿಗಳು ಕನ್ನಡದಲ್ಲಿ ಡಬ್ ಆಗಲು ಅವಕಾಶ ನೀಡಿ ಮಧ್ಯಂತರ ಆದೇಶ ನೀಡಬೇಕೆಂದು ಪಟ್ಟು ಹಿಡಿದಿದ್ದರು.
ಆದರೆ ಸಮಿತಿಯ ಉಳಿದ ಸದಸ್ಯರು ಮತ್ತು ಸಮಿತಿಯ ಅಧ್ಯಕ್ಷ ಅಶೋಕ್ ಚಾವ್ಲಾ ಸೇರಿದಂತೆ ಡೈರೆಕ್ಟರ್ ಜನರಲ್ ಈ ಸಂಬಂಧ ಕೂಲಂಕುಷ ತನಿಖೆ ನಡೆಸಿ ಅಂತಿಮ ವರದಿ ನೀಡುವವ ವರೆಗೆ ಮಧ್ಯಂತರ ತೀರ್ಪು ನೀಡುವುದು ಬೇಡವೆಂದು ಹೇಳಿದ ಹಿನ್ನಲೆಯಲ್ಲಿ ಸಭೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ.
ತನಿಖೆ ನಡೆಸುವ ಡೈರೆಕ್ಟರ್ ಜನರಲ್ ಯಾವುದೇ ಪ್ರಭಾವಕ್ಕೆ ಒಳಗಾಗದೇ ನಿಷ್ಪಕ್ಷಪಾತ ತನಿಖೆ ನಡೆಸಿ ವರದಿ ನೀಡಬೇಕೆಂದು ಆದೇಶಿಸಿ ಸಭೆ ಬರ್ಖಾಸ್ತುಗೊಂಡಿದೆ.