Don't Miss!
- News ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಜಗ್ಗು ದಾದಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಅಂಬರೀಶ' ಚಿತ್ರ ಬಾಕ್ಸ್ ಆಫೀಸಲ್ಲಿ ಸದ್ದು ಮಾಡಿದರೂ ನಿರೀಕ್ಷಿಸಿದ ಮಟ್ಟದಲ್ಲೇನು ಗುರಿ ಮುಟ್ಟಲಿಲ್ಲ. ಇದೀಗ ಅವರು 'ಐರಾವತ' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
ಐರಾವತ ಚಿತ್ರ ಬಹುತೇಕ ಪೂರ್ಣವಾಗಿದ್ದು, ಅವರ ಮುಂದಿನ ಚಿತ್ರ ಯಾವುದು ಎಂಬ ಸಂಗತಿ ಬಹಿರಂಗವಾಗಿದೆ. ರಾಘವೇಂದ್ರ ಹೆಗಡೆ ಆಕ್ಷನ್ ಕಟ್ ಹೇಳಲಿರುವ 'ಜಗ್ಗು ದಾದಾ' ಚಿತ್ರವೇ ಅವರ ಮುಂದಿನ ಚಿತ್ರ. [2015ರಲ್ಲಿ ಸ್ವಮೇಕ್ ಸಿನಿಮಾಗಳದ್ದೇ ಚಕ್ರಾಧಿಪತ್ಯ]
'ಜಗ್ಗು ದಾದಾ' ಚಿತ್ರದ ಹೆಸರೇ ಹೇಳುವಂತೆ ಇದೊಂದು ಪಕ್ಕಾ ಮಾಸ್ ಎಲಿಮೆಂಟ್ಸ್ ನಿಂದ ತುಂಬಿರುವ ಚಿತ್ರ. ದರ್ಶನ್ ಅವರು ಡಾನ್ ಆಗಿ ಚಿತ್ರದಲ್ಲಿ ಕಾಣಿಸಲಿದ್ದಾರೆ. ಜಗ್ಗು ದಾದಾ ಹೊರಗಡೆ ಡಾನ್ ಆಗಿ ಕಂಡರೂ ಹೃದಯದಲ್ಲಿ ಮಾತ್ರ ಗುಣ ಸಂಪನ್ನ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಯೂನುಸ್ ಸೆಜ್ ವಾಲ್ ಅವರ ಚಿತ್ರಕಥೆ ಇದೆ. ಇವರು ಶಾರುಖ್ ಖಾನ್ ಅವರ 'ಚೆನ್ನೈ ಎಕ್ಸ್ ಪ್ರೆಸ್' ಚಿತ್ರಕ್ಕೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿದ್ದರು. ಮುಂಬೈನ ಆರ್ಎಚ್ ಎಂಟರ್ ಟೇನ್ ಮೆಂಟ್ ಸಂಸ್ಥೆ ಜಗ್ಗು ದಾದಾ ಚಿತ್ರವನ್ನು ನಿರ್ಮಿಸುತ್ತಿದೆ. ರಾಘವೇಂದ್ರ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. (ಏಜೆನ್ಸೀಸ್)