Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಮ್ಮ ದೇವಸ್ಥಾನದಲ್ಲಿ ದರ್ಶನ್, ಅಭಿಮಾನಿಗಳ ನೂಕುನುಗ್ಗಲು
ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಗಾಂಧಿನಗರದ ಬಳಿ ಇರುವ ಅಣ್ಣಮ್ಮ ದೇವಸ್ಥಾನಕ್ಕೆ ಕುಚಿಕು ಗೆಳೆಯ ಬುಲೆಟ್ ಪ್ರಕಾಶ್ ಅವರೊಂದಿಗೆ ದೇವಿ ದರ್ಶನ ಪಡೆಯಲು ಆಗಮಿಸಿದ್ದರು.
ಇಂದು ಬೆಳಿಗ್ಗೆ (ಅಕ್ಟೋಬರ್ 16) ದರ್ಶನ್ ಅವರು ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಪ್ರೀತಿಯ ನಟನನ್ನು ನೋಡಲು ಅಭಿಮಾನಿಗಳು ಹರಸಾಹಸ ಪಟ್ಟರು. ಈ ವೇಳೆ ದೇವಸ್ಥಾನದಲ್ಲಿ ಕೊಂಚ ನೂಕು ನುಗ್ಗಲು ಉಂಟಾಗಿತ್ತು.[ಸ್ವಾಮೀ ನಿಮ್ಮ ಪ್ರಶ್ನೆಗಳಿಗೆ ದರ್ಶನ್ ಅಭಿಮಾನಿಯ ಉತ್ತರ]
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'Mr ಐರಾವತ' ಚಿತ್ರ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಹೀಗಾಗಿ ಇಂದು ಬೆಳ್ಳಂ ಬೆಳಿಗ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ದರ್ಶನ್ ಅವರು ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ದರ್ಶನ್ ಆತ್ಮೀಯ ಗೆಳೆಯ ಬುಲೆಟ್ ಪ್ರಕಾಶ್ ಅವರು ಹಾಜರಿದ್ದು, ದೇವರ ದರ್ಶನ ಪಡೆದರು.[ಕುಚಿಕು ಗೆಳೆಯನಿಗೆ ಕಾಲ್ ಶೀಟ್ ಕೊಟ್ಟ ಆ ನಟ ಯಾರು?]
ಈಗಾಗಲೇ ದರ್ಶನ್ ಅವರ 'ವಿರಾಟ್' ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರ ಭರ್ಜರಿಯಾಗಿ ತೆರೆ ಕಾಣಲಿದೆ. ಅದರ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು 'ಜಗ್ಗುದಾದ' ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ.[ಚಾಲೆಂಜಿಂಗ್ ಸ್ಟಾರ್ ವಿರಾಟ್ ಚಿತ್ರ ಕುಂಬಳಕಾಯಿಯತ್ತ...]
ಒಟ್ನಲ್ಲಿ 'Mr ಐರಾವತ' ಚಿತ್ರದ ನಂತರ ದರ್ಶನ್ ಅವರು ಅಭಿಮಾನಿಗಳಿಗೆ ಮತ್ತೊಂದು ಹಿಟ್ ಚಿತ್ರ ಕೊಡಲು ತಯಾರಾಗಿದ್ದು, ಗಾಂಧಿನಗರದಲ್ಲಿ ಮತ್ತೆ ಬಾಕ್ಸಾಫೀಸ್ ಸುಲ್ತಾನ ಸೌಂಡ್ ಮಾಡಲಿದ್ದಾರೆ.