Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆಕ್ ಬೌನ್ಸ್ ಕೇಸಲ್ಲಿ ನಟ, ನಿರ್ಮಾಪಕ ದ್ವಾರಕೀಶ್
ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕರಾದ ಕೆಸಿಎನ್ ಚಂದ್ರಶೇಖರ್ ಅವರು ಕೊಟ್ಟ ದೂರಿನ ಮೇರೆಗೆ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿತು. ಬಳಿಕ ದ್ವಾರಕೀಶ್ ಖುದ್ದು ಹಾಜರಾಗುವಂತೆ ಆಗಸ್ಟ್ 27ಕ್ಕೆ ಕೇಸಿನ ವಿಚಾರಣೆಯನ್ನು ಮುಂದೂಡಿದೆ.
ಪ್ರಿಯಾಮಣಿ ಮುಖ್ಯಭೂಮಿಕೆಯಲ್ಲಿದ್ದ 'ಚಾರುಲತಾ' ಚಿತ್ರದ ನಿರ್ಮಾಣಕ್ಕಾಗಿ ದ್ವಾರಕೀಶ್ ರು.50 ಲಕ್ಷ ಸಾಲ ಪಡೆದಿದ್ದರಂತೆ. ಈ ಸಂಬಂಧ ಅವರು ಆಂಧ್ರ ಬ್ಯಾಂಕ್ ನ ರು.50 ಲಕ್ಷದ ಚೆಕ್ ಕೆಸಿಎನ್ ಚಂದ್ರಶೇಖರ್ ಅವರಿಗೆ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದೆ ಎಂದು ಚಂದ್ರಶೇಖರ್ ಕೋರ್ಟ್ ಮೆಟ್ಟಿಲೇರಿದ್ದರು.
ದ್ವಾರಕೀಶ್ ನಿರ್ಮಾಣದ 'ಚಾರುಲತಾ' ಚಿತ್ರ ನಿರೀಕ್ಷೆಗಳೆಲ್ಲವನ್ನೂ ತಲೆಕೆಳಗೆ ಮಾಡಿತ್ತು. ಥಾಯ್ ಭಾಷೆಯ 'ಅಲೋನ್' ಚಿತ್ರವನ್ನು ಅವರು 'ಚಾರುಲತಾ' ಮಾಡಿದ್ದರು. ಈ ಬಾರಿ ಅವರು ಮತ್ತೊಮ್ಮೆ ರೊಮ್ಯಾಂಟಿಕ್ ಕಾಮಿಡಿ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ.
ಚಿತ್ರಕ್ಕೆ 'ಬ್ರೆಡ್ ಬಟರ್ ಜಾಮ್' ಎಂದು ಹೆಸರಿಟ್ಟಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರ ಸೆಟ್ಟೇರಲಿದೆ. ಈ ಬಾರಿ ಅವರು ಬಾಕ್ಸ್ ಆಫೀಸ್ ಮೇಲೆ ಕಣ್ಣಿಟ್ಟುಕೊಂಡೇ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.