Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುದುರೆಯಿಂದ ಬಿದ್ದ ಚಿರಂಜೀವಿ ಆಸ್ಪತ್ರೆಗೆ ದಾಖಲು
ಕನ್ನಡ ನಟ ಚಿರಂಜೀವಿ ಸರ್ಜಾ ಅವರು ವರದನಾಯಕ ಚಿತ್ರೀಕರಣ ವೇಳ ಗಾಯಗೊಂಡಿದ್ದಾರೆ. ಮೈಸೂರಿನಲ್ಲಿ ಕುದುರೆ ಮೇಲಿಂದ ಬಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತು.
'ವರದನಾಯಕ' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಈ ಚಿತ್ರದ ಸಾಹಸ ಸನ್ನಿವೇಶದಲ್ಲಿ ಚಿರು ಕುದುರೆಯಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯಾವುದೇ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರು ಮರಳಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಅತಿಥಿ ಪಾತ್ರವನ್ನು ಪೋಷಿಸುತ್ತಿದ್ದಾರೆ.
ನಿಖಿತಾ ಪಾಟೀಲ್, ಸಮೀರಾ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಶೋಭ್ರಾಜ್, ಶರತ್ ಲೋಹಿತಾಶ್ವಾ, ಬುಲೆಟ್ ಪ್ರಕಾಶ್, ಶರಣ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಕೇಶ್ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಈಶ್ವರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಚಿತ್ರಕ್ಕಿದೆ. (ಏಜೆನ್ಸೀಸ್)