Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೆನ್ನಿಸ್ ಕೃಷ್ಣ ವೃತ್ತಿ ಬದುಕನ್ನ ಬದಲಿಸಿದ 'ವೀಕೆಂಡ್ ವಿತ್ ರಮೇಶ್'.!
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ಸಾಧಕರ ಸಾಧನೆಯನ್ನು ಗುರುತಿಸಿ ಅವರಿಗೆ ನೀಡುವ ಗೌರವ. ಸಾಧನೆ ಮಾಡಲು ಸ್ಫೂರ್ತಿ ತುಂಬುವುದು ಕೂಡ ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಇಂತಹ ಕಾರ್ಯಕ್ರಮ ಈಗ ಹಾಸ್ಯನಟ ಟೆನ್ನಿಸ್ ಕೃಷ್ಣ ಅವರ ಸಿನಿ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿದೆ.
30 ವರ್ಷಗಳಿಂದ ಕನ್ನಡಿಗರನ್ನು ನಗಿಸಿಕೊಂಡು ಬಂದ ಹಾಸ್ಯ ನಟ ಟೆನ್ನಿಸ್ ಕೃಷ್ಣ. ಇತ್ತೀಚಿನ ದಿನದಲ್ಲಿ ಅವರಿಗೆ ಬರುವ ಸಿನಿಮಾ ಅವಕಾಶಗಳು ತೀರಾ ಕಡಿಮೆಯಾಗಿದ್ದವು. ಆದರೆ ಕಿರುತೆರೆಯ ಜನಪ್ರಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ಅವರ ಪಾಲಿಗೆ ವರವಾಗಿದೆ.
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ಟೆನ್ನಿಸ್ ಕೃಷ್ಣ ಅವರ ಅದೃಷ್ಟವನ್ನು ಬದಲಾಯಿಸಿದ್ದು ಹೇಗೆ ಎಂಬ ಕುತೂಹಲ ಇದ್ದರೆ ಮುಂದೆ ಓದಿ...
ಜಗ್ಗೇಶ್ ಸಂಚಿಕೆಯಲ್ಲಿ
ನವರಸ ನಾಯಕ ಜಗ್ಗೇಶ್ ಅವರ 'ವೀಕೆಂಡ್ ವಿತ್ ರಮೇಶ್' ಸಂಚಿಕೆಯಲ್ಲಿ ಅತಿಥಿಯಾಗಿ ಹಾಸ್ಯ ನಟ ಟೆನ್ನಿಸ್ ಕೃಷ್ಣ ಆಗಮಿಸಿದ್ದರು. ಆಗ ಅವರು ಅಲ್ಲಿ ಆಡಿದ ಮಾತು ಈಗ ಅವರ ಸಿನಿ ಜರ್ನಿಯಲ್ಲಿ ದೊಡ್ಡ ತಿರುವಿಗೆ ಕಾರಣವಾಗಿದೆ.
ಡೈರೆಕ್ಟರ್ ಕ್ಯಾಪ್ ತೊಟ್ಟ ಟೆನ್ನಿಸ್ ಕೃಷ್ಣ
ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ಟೆನ್ನಿಸ್ ಕೃಷ್ಣ ಅವರು ಈಗ ನಿರ್ದೇಶಕರಾಗುತ್ತಿದ್ದರೆ. ಅದಕ್ಕೆ ಮುಖ್ಯ ಕಾರಣವಾಗಿರುವುದು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ.
ನಿರ್ದೇಶನದ ಆಫರ್
'ವೀಕೆಂಡ್' ಕಾರ್ಯಕ್ರಮದಲ್ಲಿ ಆಗಮಿಸಿದ್ದ ಟೆನ್ನಿಸ್ ಕೃಷ್ಣ 'ಚಿತ್ರರಂಗದಲ್ಲಿ ಇಂದು ಹಿರಿಯ ಪೋಷಕ ನಟರಿಗೆ ಅವಕಾಶವೇ ಇಲ್ಲ' ಎಂದು ತಮ್ಮ ಅಳಲು ತೋಡಿಕೊಂಡಿದ್ದರು. ಅದನ್ನು ನೋಡಿದ್ದ ಅರುಣ್ ಹೊಸಕೊಪ್ಪ ಮತ್ತು ಅಚ್ಯುತ್ ಗೌಡ ಎಂಬುವವರು ಈಗ ಸಿನಿಮಾ ನಿರ್ದೇಶನದ ಆಫರ್ ನೀಡಿದ್ದಾರೆ.
ಮತ್ತೆ.. ಮತ್ತೆ...
ಟೆನ್ನಿಸ್ ಕೃಷ್ಣ ನಿರ್ದೇಶನದ ಸಿನಿಮಾಗೆ 'ಮತ್ತೆ ಮತ್ತೆ' ಎಂಬ ಟೈಟಲ್ ಫಿಕ್ಸ್ ಆಗಿದೆ. ಇದೊಂದು ಕಾಲೇಜ್ ಕಥೆಯಾಗಿದ್ದು, ಸಂಪೂರ್ಣ ಕಾಮಿಡಿ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆಯಂತೆ.
ಸಹಾಯಕ ನಿರ್ದೇಶಕರಾಗಿದ್ದ ಟೆನ್ನಿಸ್
ಈ ಹಿಂದೆ ಕೆಲ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಅನುಭವ ಹೊಂದಿದ್ದ ಟೆನ್ನಿಸ್ ಕೃಷ್ಣ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಚಿತ್ರದಲ್ಲಿ ಏಳು ಪ್ರಮುಖ ಪಾತ್ರಗಳಿದ್ದು, ಆ ಪಾತ್ರಗಳಿಗೆ ಕಲಾವಿದರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದಂತೆ.