Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೆಲ್ಲಾ ಮೇಘನಾ ರಾಜ್ ಹೆಸರಿಗೆ ಮಸಿ ಬಳಿಯುವ ಕೆಲಸ?
ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್ ಮತ್ತು ಮಾಲಿವುಡ್ ನಲ್ಲಿ ಬೇಡಿಕೆ ಕಂಡುಕೊಂಡಿರುವ ನಟಿ ಮೇಘನಾ ರಾಜ್ ಈಗ ವಿವಾದಕ್ಕೆ ಸಿಲುಕಿರುವ ಸಂಗತಿ ನಿಮಗೆ ಗೊತ್ತೇ ಇದೆ.
''ಮೇಘನಾ ರಾಜ್ ನನ್ನ ಮದುವೆ ಆಗಿ ವಂಚಿಸಿದ್ದಾರೆ'' ಎಂದು ತಮಿಳುನಾಡಿನ ಧರ್ಮಪುರಿ ಮೂಲದ ಜನಾರ್ಧನ್ ಎಂಬ ವ್ಯಕ್ತಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಈ-ಮೇಲ್ ಮೂಲಕ ದೂರು ನೀಡಿದ್ದಾರೆ. [ನಟಿ ಮೇಘನಾ ರಾಜ್ ಬಗ್ಗೆ ಕೇಳಿಬಂದಿರುವ ವಂಚನೆ ಆರೋಪ ನಿಜವೇ?]
ಅಸಲಿಗೆ, ಕನ್ನಡ ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಷಾಯಿ ದಂಪತಿಯ ಪುತ್ರಿ ಮೇಘನಾ ರಾಜ್ ಕದ್ದು ಮುಚ್ಚಿ ಮದುವೆ ಆಗುವ ಅವಶ್ಯಕತೆ ಇತ್ತಾ?
ಮಗಳ ಈ ಮದುವೆ ವಿವಾದದ ಬಗ್ಗೆ ನಟಿ ಪ್ರಮೀಳಾ ಜೋಷಾಯಿ ಏನು ಹೇಳ್ತಾರೆ ಅಂತ ತಿಳಿಯಲು ಕೆಳಗಿರುವ ಸ್ಲೈಡ್ ಗಳನ್ನು ಕ್ಲಿಕ್ ಮಾಡಿ....
ನಟಿ ಮೇಘನಾ ರಾಜ್ ಬೆಂಗಳೂರಿನಲ್ಲಿಲ್ಲ!
ಮೇಘನಾ ರಾಜ್ ಕುಟುಂಬದ ಮೂಲಗಳು ತಿಳಿಸಿರುವ ಪ್ರಕಾರ, ಸದ್ಯ ನಟಿ ಮೇಘನಾ ರಾಜ್ ಬೆಂಗಳೂರಿನಲ್ಲಿಲ್ಲ. [ಚಿರು ಸರ್ಜಾ-ಮೇಘನಾ ನಡುವೆ ಏನಿದೆ! ಏನಿಲ್ಲ?]
ಪ್ರತಿಕ್ರಿಯೆ ನೀಡದ ಮೇಘನಾ ರಾಜ್
ತಮ್ಮ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದರೂ, ನಟಿ ಮೇಘನಾ ರಾಜ್ ಪ್ರತಿಕ್ರಿಯೆ ನೀಡಲು ತಯಾರಿಲ್ಲ. ಅವರು ಫೋನ್ ಕಾಲ್ ಗಳನ್ನೂ ರಿಸೀವ್ ಮಾಡುತ್ತಿಲ್ಲ. [ಕನ್ನಡದಲ್ಲಿ ಸಿಕ್ಕಾಪಟ್ಟೆ ಬಿಜಿಯಾದ ಕನ್ನಡತಿ ಮೇಘನಾ ರಾಜ್]
ಮೇಘನಾ ರಾಜ್ ತಾಯಿ ಏನಂತಾರೆ?
ಮೇಘನಾ ರಾಜ್ ತಾಯಿ ಪ್ರಮೀಳಾ ಜೋಷಾಯಿ ಹೇಳಿದಿಷ್ಟು - ''ದೂರಿನ ಬಗ್ಗೆ ಚಾನೆಲ್ ಗಳಲ್ಲಿ ಸುದ್ದಿ ಬಂದಾಗಲೇ ಗೊತ್ತಾಗಿದ್ದು. ಈ ಸುದ್ದಿ ಕೇಳಿ ಆಶ್ಚರ್ಯ ಆಯ್ತು'' [ನಟ ಚಿರಂಜೀವಿ ಸರ್ಜಾಗೆ ನಿದಿರೆ ಬರದಿರೆ ಏನಂತೀ?]
ಯಾರು ಅನ್ನೋದೇ ಗೊತ್ತಿಲ್ಲ!
''ದೂರು ನೀಡಿರುವವರು ಯಾರು ಅಂತಲೇ ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಆಗಬೇಕು'' - ಪ್ರಮೀಳಾ ಜೋಷಾಯಿ [ಬೆಂಗಳೂರು 'ಸಂಪಿಗೆ' ಮೇಘನಾ, ಇದು ನಿಜನಾ?]
ಮಗಳ ಹೆಸರಿಗೆ ಮಸಿ ಬಳಿಯುವ ಪ್ರಯತ್ನ
''ಮಗಳಿಗೆ ಆಗದೇ ಇರೋರು ಯಾರೋ ಹೀಗೆ ಮಾಡಿರಬೇಕು. ಸುಮ್ಮನೆ ಅವಳ ಹೆಸರಿಗೆ ಮಸಿ ಬಳಿಯುತ್ತಿದ್ದಾರೆ'' - ಪ್ರಮೀಳಾ ಜೋಷಾಯಿ
ತಂದೆ ಸುಂದರ್ ರಾಜ್ ಏನಂತಾರೆ?
''ಪ್ರಕರಣದ ಬಗ್ಗೆ ಪೊಲೀಸರು ಮತ್ತು ವಕೀಲರ ಜೊತೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ'' ಅಂತ ತಂದೆ ಸುಂದರ್ ರಾಜ್ ಹೇಳುತ್ತಾರೆ.