Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗಳನ್ನು ಕೊಡ್ತೀನಿ ಎಂದು ರಜನಿ ಮೋಸ, ದೂರು
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ದೇವರೆಂದೇ ಭಾವಿಸುವ ಅಭಿಮಾನಿ ಬಳಗವಿದೆ. ಇದುವರೆಗೂ ರಜನಿಕಾಂತ್ ಅದೆಷ್ಟೂ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ, ಮಾಡುತ್ತಿದ್ದಾರೆ. ಆ ರೀತಿಯ ವ್ಯಕ್ತಿಯ ಮೇಲೆ ವ್ಯಕ್ತಿಯೊಬ್ಬ ಗಂಭೀರ ಆರೋಪ ಮಾಡಿದ್ದಾರೆ.
ಕೇವಲ ಆರೋಪವಷ್ಟೇ ಅಲ್ಲ ಪೊಲೀಸ್ ಠಾಣೆ ಮೆಟ್ಟಿಲನ್ನೂ ಹತ್ತಿದ್ದಾರೆ. ಸುಮಾರು 38ರ ಪ್ರಾಯದ ಪಿ.ಕೆ. ಕರುಣಾ ಎಂಬುವವರು ರಜನಿಕಾಂತ್ ನನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದಾರೆ. ಈತ ಮಾಡುತ್ತಿರುವ ಆರೋಪವೂ ಸಖತ್ ಇಂಟರೆಸ್ಟಿಂಗ್ ಆಗಿದೆ.
ಅಷ್ಟಕ್ಕೆ ಸುಮ್ಮನಾಗದ ಕರುಣಾ ಒಂದು ಆಂಗ್ಲ ಪತ್ರಿಕೆಯನ್ನು ಸಂಪರ್ಕಿಸಿ ತನ್ನ ಕಷ್ಟ ಹೇಳಿಕೊಂಡಿದ್ದಾನೆ. ಐಶ್ವರ್ಯಾ ರಜನಿಕಾಂತ್ ಅವರು ಒಂದು ಅನಿಮೇಷನ್ ಮೂವಿ ಮಾಡಲು ನಿರ್ಧರಿಸಿದ್ದರು. ತಾನು ಸೆಟ್ ಹಾಕಲು ಒಪ್ಪಿಕೊಂಡಿದ್ದೆ. ಈ ಸಂದರ್ಭದಲ್ಲಿ ರಜನಿಕಾಂತ್ ಅವರು ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಮಾತುಕೊಟ್ಟಿದ್ದರು.
ಚಿತ್ರದಲ್ಲಿ ಲೀಡ್ ಪಾತ್ರಕ್ಕೆ ಅವಕಾಶ ಕೊಡುತ್ತೇನೆ ಎಂದೂ ಭರವಸೆ ಕೊಟ್ಟಿದ್ದರು. ಈಗ ಅವರು ತಮ್ಮ ಮಾತನ್ನು ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈತನ ಮಾತಿನಲ್ಲಿ ಹುರುಳಿಲ್ಲ ಹಾಗೂ ಸಾಕ್ಷ್ಯಾಧಾರಗಳಿಲ್ಲ ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ಕೊಟ್ಟು ಮನೆಗೆ ಕಳುಹಿಸಿದ್ದಾರೆ.