Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೆಬ್ರವರಿಯಿಂದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 4 ಶುರು
ಸಿನಿಮಾ ಜಗತ್ತಿನ ತಾರೆಗಳು ಮತ್ತೆ ಮೈದಾನಕ್ಕೆ ಇಳಿಯುವ ಸಮಯ ಬಂದಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ನಾಲ್ಕನೇ ಆವೃತ್ತಿಗೆ ವೇದಿಕೆ ಸಿದ್ಧವಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆದರೆ 2014ರ ಜನವರಿ ಕೊನೆಗೆ ಆಟ ಶುರುವಾಗಲಿದೆ.
ಫೈನಲ್ ಮ್ಯಾಚ್ ಫೆಬ್ರವರಿ ಕೊನೆಗೆ ನಡೆಯಲಿದೆ. ಇದೊಂದು ನಾನ್ ಪ್ರೊಫೆಷನಲ್ ಪುರುಷರ ಕ್ರಿಕೆಟ್ ಮ್ಯಾಚ್ ಅನ್ನಿಸಿಕೊಂಡಿದ್ದರೂ, ನಾವೂ ಯಾರಿಗೂ ಕಮ್ಮಿ ಇಲ್ಲ ಎಂಬಂತೆ ತಾರೆಗಳು ಆಡಿದ್ದಾರೆ. ಪಕ್ಕಾ ಪ್ರೊಫೆಷನಲ್ ಆಟ ಅಲ್ಲದಿದ್ದರೂ ಒಂದು ಮಟ್ಟಕ್ಕೆ ಅಭಿಮಾನಿಗಳನ್ನು ರಂಜಿಸಿದ್ದಾರೆ.
2011ರಲ್ಲಿ ಆರಂಭವಾದ ಸಿಸಿಎಲ್ ಲೀಗ್ ಗಳು ಬರುಬರುತ್ತಾ ಜನಪ್ರಿಯತೆ ಗಳಿಸಿಕೊಂಡವು. ಐಸಿಸಿ ಕ್ರಿಕೆಟ್ ಮ್ಯಾಚ್ ಗಳಿಗೂ ಇದರಿಂದ ಕೊಂಚ ಹೊಡೆತಬಿತ್ತು. ಸಿಸಿಎಲ್ ಮ್ಯಾಚ್ ಗಳಿಗೆ ಮಾಧ್ಯಮಗಳು ಸಾಕಷ್ಟು ಪ್ರಚಾರ ಕೊಡುವ ಮೂಲಕ ಇನ್ನಷ್ಟು ಜನಪ್ರಿಯತೆ ಸಿಕ್ಕಿತು.
ಸಿಸಿಎಲ್ 3 ಕಪ್ ಗೆದ್ದ ಕರ್ನಾಟಕ ಬುಲ್ಡೋಜರ್ಸ್
ಇದುವರೆಗೂ ನಡೆದ ಮೂರು ಆವೃತ್ತಿಗಳಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಫೈನಲ್ ತಲುಪಿರುವುದು ವಿಶೇಷ. 2013ರಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ತೆಲುಗು ವಾರಿಯರ್ಸ್ ತಂಡವನ್ನು ಮಣ್ಣುಮುಕ್ಕಿಸಿ ಸಿಸಿಎಲ್ ಕಪ್ ಗೆದ್ದಿತ್ತು.
ಪ್ರಸ್ತುತ ಎಂಟು ತಂಡಗಳ ನಡುವೆ ಪೈಪೋಟಿ
ಕರ್ನಾಟಕ ಬುಲ್ಡೋಜರ್ಸ್ ಸೇರಿದಂತೆ ಸಿಸಿಎಲ್ ನಲ್ಲಿ ಪ್ರಸ್ತುತ ಎಂಟು ತಂಡಗಳಿವೆ. ಚೆನ್ನೈ ರೈನೋಸ್, ತೆಲುಗು ವಾರಿಯರ್ಸ್, ಮುಂಬೈ ಹೀರೋಸ್, ಬೆಂಗಾಲ್ ಟೈಗರ್ಸ್, ಭೋಜ್ ಪುರಿ ದಬಾಂಗ್ಸ್, ವೀರ್ ಮರಾಠಿ.
ಚೆನ್ನೈ ರೈನೋಸ್ ಎರಡು ಬಾರಿ ಚಾಂಪಿಯನ್
ಇನ್ನು ಚೆನ್ನೈ ರೈನೋಸ್ ತಂಡ ಇದುವರೆಗೂ ಎರಡು ಬಾರಿ (2011 ಮತ್ತು 2012) ಚಾಂಪಿಯನ್ ಅನ್ನಿಸಿಕೊಂಡಿದೆ. 2013ರ ಮೂರನೇ ಆವೃತ್ತಿಯಲ್ಲಿ ಎರಡು ಹೊಸತಂಡಗಳು ವೀರ್ ಮರಾಠಿ ಹಾಗೂ ಭೋಜ್ ಪುರಿ ದಬಾಂಗ್ಸ್ ಸೇರ್ಪಡೆಯಾದವು.
ಕರ್ನಾಟಕ ಬುಲ್ಡೋಜರ್ಸ್ ನಲ್ಲಿ ಯುವನಟರು
ಈ ಬಾರಿಯ ಸಿಸಿಎಲ್ 4ನೇ ಆವೃತ್ತಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಯಾರ್ಯಾರು ಇರುತ್ತಾರೆ ಎಂಬ ಬಗ್ಗೆ ಕುತೂಹಲವಿದ್ದೇ ಇದೆ. ಈ ಹಿಂದೆ ಕಿಚ್ಚ ಸುದೀಪ್ ನಾಯಕತ್ವದಲ್ಲಿ ತಂಡ ಮುನ್ನುಗ್ಗುತ್ತಿತ್ತು.
ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿರುವ ಯುವಪಡೆ
ಚಿರಂಜೀವಿ ಸರ್ಜಾ, ಧ್ರುವ್ ಶರ್ಮಾ, ಪ್ರದೀಪ್, ತರುಣ್ ಚಂದ್ರ ಸೇರಿದಂತ ಹಲವು ಯುವ ಹೀರೋಗಳು ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಮಿಂಚಿದ್ದಾರೆ.