Don't Miss!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ಹೋರಾಟಕ್ಕೆ ಧುಮುಕಿದ ಕ್ರೇಜಿಸ್ಟಾರ್
ಕನ್ನಡ ಚಿತ್ರೋದ್ಯಮ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದೆ. ಅಕ್ಟೋಬರ್ 6ರಂದು ಕನ್ನಡ ಚಿತ್ರೋದ್ಯಮ ಬಂದ್ ಗೆ ಕರೆನೀಡಿದೆ. (ಸಂಪೂರ್ಣ ವರದಿ ಓದಿ)
ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಕಾವೇರಿ ಹೋರಾಟಕ್ಕೆ ಧುಮುಕಿದ್ದಾರೆ. ನಮಗೇ ಕುಡಿಯಲು ನೀರಿಲ್ಲ. ಇನ್ನು ತಮಿಳುನಾಡಿಗೆ ಬಿಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಮೊದಲು ನಮಗೆ ನೀರು ಬೇಕು. ಆಮೇಲೆ ಬೇರೆಯವರ ಬಗ್ಗೆ ವಿಚಾರ ಮಾಡೋಣ ಎಂದಿದ್ದಾರೆ. ಕಾವೇರಿ ಹೋರಾಟದಲ್ಲಿ ತಾವು ಸಕ್ರಿಯವಾಗಿ ಭಾಗವಹಿಸಲಿದ್ದು ಕನ್ನಡ ಚಿತ್ರೋದ್ಯಮದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
ಅವರು ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡುತ್ತಾ, ತಮಗೆ ರಾಜಕೀಯ ಗೊತ್ತಿಲ್ಲ ಎಂದರು.
ಕನ್ನಡ ಚಿತ್ರೋದ್ಯಮ ಹಾಗೂ ಕನ್ನಡಿಗರಿಗೆ ಅನ್ಯಾಯವಾದಾಗಲೆಲ್ಲಾ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಬೀದಿಗಿಳಿದು ಪ್ರತಿಭಟಿಸುತ್ತಿರುವುದು ಗೊತ್ತೇ ಇದೆ. (ಒನ್ಇಂಡಿಯಾ ಕನ್ನಡ)