Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಸಂಗೊಳ್ಳಿ ರಾಯಣ್ಣ' ಟ್ರೇಲರ್ ನೋಡಿ!
'ಸಂಗೊಳ್ಳಿ ರಾಯಣ್ಣ' ಚಿತ್ರವನ್ನು ಕರ್ನಾಟಕದಲ್ಲಿ ಮಾತ್ರವಲ್ಲದೇ, ಮುಂಬೈ, ಪುಣೆ, ಗೋವಾಗಳಲ್ಲಿಯೂ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ ನಿರ್ಮಾಪಕ ಅಪ್ಟಪುಗೋಳ್. ಇನ್ನು ಅವರ ಗೆಳೆಯರು ಇದನ್ನು ಬ್ರಿಟನ್, ಅಮೆರಿಕಾ ಹಾಗೂ ಆಸ್ಟ್ರೇಲಿಯಾಗಳಲ್ಲೂ ಕೂಡ ಬಿಡುಗಡೆ ಮಾಡಲಿದ್ದಾರಂತೆ. ಆದರೆ ಎಲ್ಲೆಲ್ಲಿ ಎಷ್ಟೆಷ್ಟು ಚಿತ್ರಮಂದಿರಗಳಲ್ಲಿ ಬಿಡುಗಡೆ ಎಂಬ ಮಾಹಿತಿ ಸದ್ಯಕ್ಕಿಲ್ಲ. ಅಂದಹಾಗೆ, 3 ನಿಮಿಷಗಳ 'ಸಂಗೊಳ್ಳಿ ರಾಯಣ್ಣ ಟ್ರೇಲರ್' ಬಿಡುಗಡೆಯಾಗಿದೆ.
'ಸಂಗೊಳ್ಳಿ ರಾಯಣ್ಣ' ಚಿತ್ರದ ಟ್ರೇಲರ್ ನಲ್ಲಿ ಸುದೀಪ್ ಧ್ವನಿಯಿದೆ. ಅಂದರೆ, ಸಂಗೊಳ್ಳಿ ರಾಯಣ್ಣ ಎಂಬ ವ್ಯಕ್ತಿಯ ಬಗ್ಗೆ, ಇತಿಹಾಸದ ಬಗ್ಗೆ ಹಾಗೂ ಈ ಚಿತ್ರದಲ್ಲಿ ಏನಿದೆ ಎಂಬ ಬಗ್ಗೆ ಈ ಟ್ರೇಲರ್ ನಲ್ಲಿ ಸುದೀಪ್ ಧ್ವನಿಯಲ್ಲಿ ವಿವರಣೆ ನೀಡಲಾಗಿದೆ. ಟ್ರೇಲರ್ ನಲ್ಲಿ ಸಂಗೊಳ್ಳಿ ರಾಯಣ್ಣ ಪಾತ್ರಧಾರಿ ದರ್ಶನ್ ಅಭಿನಯದ ದೃಶ್ಯಗಳ ತುಣುಕುಗಳಿವೆ. ಬಿಡುಗಡೆಯಾಗಿರುವ ಟ್ರೇಲರ್ ನಲ್ಲಿರುವ ದೃಶ್ಯಗಳು ಈಗಾಗಲೇ ಬಹಳಷ್ಟು ಜನರ ಮೆಚ್ಚುಗೆ ಗಳಿಸಿವೆ.
ಈ ಚಿತ್ರದಲ್ಲಿ ನಾಯಕ ದರ್ಶನ್ ಅವರಿಗೆ ನಾಯಕಿಯಾಗಿ ನಿಖಿತಾ ತುಕ್ರಲ್ ನಟಿಸಿದ್ದಾರೆ. ಹಿರಿಯ ನಟಿ ಜಯಪ್ರದಾ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟಿ ಉಮಾಶ್ರೀ, ನಟ ಬ್ಯಾಂಕ್ ಜನಾರ್ಧನ್, ಶೋಭರಾಜ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರದರ್ಶನಕ್ಕೆ ಟಿಕೆಟ್ ದರವನ್ನು ರು. 5 ಹೆಚ್ಚು ನಿಗದಿಪಡಿಸಲಾಗಿದೆ. ಉಳಿದಂತೆ ಸಿಕ್ಕ ಮಾಹಿತಿ ಪ್ರಕಾರ ಭಾರಿ ಬಜೆಟ್ಟಿನ ಈ ಚಿತ್ರವನ್ನು ಕಡಿಮೆ ಥಿಯೇಟರುಗಳಲ್ಲಿ ಬಿಡುಗಡೆ ಮಾಡಲಾಗುವುದು.
ಇಷ್ಟೇ ಅಲ್ಲ, ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಿದ ನಂತರ ತಮಿಳು, ತೆಲುಗು ಹಾಗೂ ಹಿಂದಿಗೆ ಡಬ್ ಮಾಡುವ ಯೋಚನೆ ನಿರ್ಮಾಪಕರಿಗಿದೆ. ಆ ವಿಷಯ ಇನ್ನೂ ಮಾತುಕತೆ ಹಂತದಲ್ಲಿದ್ದು ಅಂತಿಮ ಫಲಿತಾಂಶ ಇನ್ನಷ್ಟೇ ಹೊರಬರಬೇಕಾಗಿದೆ. ಅಂದಹಾಗೆ ಚಿತ್ರವನ್ನು ರಾಜ್ಯದಾದ್ಯಂತ ಬಿಡುಗಡೆ ಮಾಡಲಿರುವ ವಿತರಕ ಎಚ್.ಡಿ. ಗಂಗರಾಜು, "ಚಿತ್ರದ ಬಜೆಟ್ ಹೆಚ್ಚಾಗಿರುವುದರಿಂದ ಅನಿವಾರ್ಯವಾಗಿ ಟಿಕೆಟ್ ದರದಲ್ಲಿ ರು. 5 ಏರಿಕೆ ಮಾಡಲಾಗಿದೆ" ಎಂದಿದ್ದಾರೆ.
ಇನ್ನು ಒಂದು ಪ್ರಮುಖ ಮಾಹಿತಿಯೆಂದರೆ, ನಿರ್ಮಾಪಕರು ಹಾಗೂ ವಿತರಕರು ಈ ಚಿತ್ರವನ್ನು ಸಿಕ್ಕಾಪಟ್ಟೆ ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡದಿರಲು ನಿರ್ಧರಿಸಿದ್ದಾರೆ. ಅಂದಹಾಗೆ, ನಾಗಣ್ಣ ನಿರ್ದೇಶನದ ಈ ಚಿತ್ರಕ್ಕೆ ಯಶೋವರ್ಧನ್ ಸಂಗೀತ ನೀಡಿದ್ದಾರೆ. ರಮೇಶ್ ಬಾಬು ಛಾಯಾಗ್ರಹಣ ಹಾಗೂ ಗೋವರ್ಧನ್ ಸಂಕಲನ ಚಿತ್ರಕ್ಕಿದೆ. ಒಟ್ಟಿನಲ್ಲಿ ಬಹುನಿರೀಕ್ಷೆಯ, ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣ ಚಿತ್ರವು ಅಕ್ಟೋಬರ್ 19 ರಂದು ತೆರೆಗೆ ಅಪ್ಪಳಿಸಲಿದೆ. (ಒನ್ ಇಂಡಿಯಾ ಕನ್ನಡ)