Don't Miss!
- News ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಅಪಪ್ರಚಾರ:ಕೆ ಸುಧಾಕರ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಧ್ಯಕ್ಷ ಶರಣ್ ಗಾಯನಕ್ಕೆ ಈಗ ಸಖತ್ ಡಿಮ್ಯಾಂಡ್
ನಟ ಶರಣ್ ನಟನೆಯ ಜೊತೆಗೆ ಈಗ ಹಾಡು ಹೇಳುವುದು ಸಹ ಹೆಚ್ಚಾಗಿದೆ. ಹಾಸ್ಯ ನಟನಾಗಿದ್ದ ಶರಣ್ ನಂತರ ನಾಯಕರಾದರು. ನಾಯಕನಾಗಿ ಯಶಸ್ಸು ಗಳಿಸಿದ ಶರಣ್ ಈಗ ಗಾಯಕನಾಗಿ ಹೆಚ್ಚು ಜನಪ್ರಿಯರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಅಭಿನಯದ 'ಕ್ರ್ಯಾಕ್' ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ.
ಶರಣ್ ಹಾಡಿರುವ ಈ ಹಾಡಿಗೆ ಶಮಿತಾ ಮಲ್ನಾಡ್ ಸಂಗೀತ ಒದಗಿಸಿದ್ದಾರೆ. ನಿರ್ದೇಶಕ ರಾಮ್ ನಾರಾಯಣ್ ಈ ಹಾಡಿಗೆ ಸಾಹಿತ್ಯ ಬರೆದಿದ್ದು, 'ನಂಗೆ ನಾನೇ ಕಟ್ಟಿಕೊಂಡೆ ಗೋರಿ..' ಎಂಬ ಸಾಲುಗಳು ಕೇಳಲು ಹಿತವಾಗಿದೆ. ಸದ್ಯ, ಟ್ರೈಲರ್ ಮೂಲಕ ಸೌಂಡ್ ಮಾಡುತ್ತಿರುವ ಕ್ರ್ಯಾಕ್ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.
ಶರಣ್ ಈಗಾಗಲೇ 'ವಜ್ರಕಾಯ', 'ರಾಜರಾಜೇಂದ್ರ', 'ಬುಲೆಟ್ ಬಸ್ಯಾ' ಸೇರಿದಂತೆ ಹಲವು ಚಿತ್ರಗಳಲ್ಲಿ ಹಾಡಿದ್ದಾರೆ. ಲೇಟೆಸ್ಟ್ ಆಗಿ ಗಣೇಶ್ ನಟನೆಯ 'ಮುಗುಳುನಗೆ' ಚಿತ್ರದಲ್ಲಿಯೂ ಶರಣ್ ಹಾಡೊಂದಕ್ಕೆ ಕೂಡ ದ್ವನಿಯಾಗಿದ್ದರು. 'ಮುಗುಳುನಗೆ' ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದು, ಇದೇ ಮೊದಲ ಬಾರಿಗೆ ಹರಿಕೃಷ್ಣ ಸಂಗೀತಕ್ಕೆ ಶರಣ್ ಹಾಡಿದ್ದಾರೆ.