Don't Miss!
- News 21 ರಾಜ್ಯ, 102 ಲೋಕಸಭಾ ಸ್ಥಾನ, 1625 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಮತದಾರ ಪ್ರಭು ಸಿದ್ಧ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ಗೆ ದೇವಿಶ್ರೀ ಗುರೂಜಿ ಎಂಟ್ರಿ
ರಾಸಲೀಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಿವಾದಕ್ಕೆ ಸಿಲುಕಿದ್ದ ದಿವ್ಯ ಜ್ಯೋತಿಷ್ಯಾಲಾಯದ ದೇವಿಶ್ರೀ ಗುರೂಜಿ ಇದೀಗ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಆದರೆ ಅವರು ಕಾಳಿಮಠದ ಋಷಿಕುಮಾರ್ ಅವರ ತರಹ ಬಣ್ಣಹಚ್ಚುತ್ತಿಲ್ಲ. ಬದಲಾಗಿ ಸಿನಿಮಾ ನಿರ್ಮಾಣಕ್ಕೆ ಕೈಹಾಕಿದ್ದಾರೆ.
ತಮ್ಮ ನಿರ್ಮಾಣ ಸಂಸ್ಥೆಗೆ ದೇವಿಶ್ರೀ ಪ್ರೊಡಕ್ಷನ್ಸ್ ಎಂದು ಹೆಸರಿಟ್ಟಿದ್ದು ಈಗಾಗಲೆ ಅದನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ರು.50 ಸಾವಿರ ನಗದು ಶುಲ್ಕ ಹಾಗೂ ಕೆಲವು ದಾಖಲೆಗಳನ್ನು ಫಿಲಂ ಚೇಂಬರ್ ಗೆ ಸಲ್ಲಿಸಿದ್ದಾರೆ. [ಜ್ಯೋತಿಷಿ ರಾಮಸ್ವಾಮಿ ದೇವಿಶ್ರೀ ರಾಸಲೀಲೆ ಬಹಿರಂಗ]
ತಮ್ಮ ಚೊಚ್ಚಲ ನಿರ್ಮಾಣದ ಚಿತ್ರಕ್ಕೆ ಕೈತುತ್ತು ಎಂದು ಹೆಸರಿಟ್ಟಿದ್ದಾರೆ. ರಾಜೀವ್ ಕೃಷ್ಣ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆ. ಅಮ್ಮ ಮತ್ತು ಮಗುವಿನ ನಡುವಿನ ಸಂಬಂಧದ ಕಥಾಹಂದರವನ್ನು ಚಿತ್ರ ಒಳಗೊಂಡಿದೆ.
ಮಗನ ಪಾತ್ರವನ್ನು ಯಶವಂತ್ ಪೋಷಿಸಲಿದ್ದು, ತಾಯಿಯ ಪಾತ್ರಕ್ಕೆ ಸುಧಾರಾಣಿ ಅವರನ್ನು ಸಂಪರ್ಕಿಸಲಾಗಿದೆಯಂತೆ. ಆದರೆ ಸುಧಾರಾಣಿ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಪ್ರಮುಖ ಪಾತ್ರದಲ್ಲಿ ಕಿಲ್ಲರ್ ವೆಂಕಟೇಶ್ ಸಹ ಇದ್ದಾರೆ ಎನ್ನುತ್ತವೆ ಮೂಲಗಳು.