Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀರಿನಲ್ಲಿ ಮುಳುಗಿ ಇಬ್ಬರು ನಟಿಯರು ದುರಂತ ಸಾವು
ಧನುಷ್ ಅಭಿನಯಿಸುತ್ತಿರುವ ತಮಿಳಿನ 'ನಯ್ಯಾಂಡಿ' ಚಿತ್ರೀಕರಣ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ರೊಮ್ಯಾಂಟಿಕ್ ಕಾಮಿಡಿ ಚಿತ್ರದ ಶೂಟಿಂಗ್ ತಿರುವಾರೂರಿನಲ್ಲಿ ನಡೆಯುತ್ತಿದೆ. ಈ ಚಿತ್ರದ ಸಹ ನಟಿಯರಾದ ಸರಸ್ವತಿ (24), ಸುಕನ್ಯಾ (22) ಹಾಗೂ ವಿಜಿ (21) ಎಂಬುವವರು ಕೊಳವೊಂದರಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಈ ಮೂವರಿಗೂ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಆಳವಿಲ್ಲದ ಸ್ಥಳದಲ್ಲಿ ಇವರು ಸ್ನಾನ ಮಾಡುತ್ತಿದ್ದರು. ಇನ್ನೂ ಮುಂದೆ ಆಳಕ್ಕೆ ಇಳಿದಾಗ ನೀರಿನಲ್ಲಿನಲ್ಲಿರುವ ಗಿಡಗಂಟೆಗಳು ಇವರ ಕಾಲಿಗೆ ಸುತ್ತಿಕೊಂಡಿವೆ. ಇವರು ಅಲ್ಲಿಂದ ಹೊರಬರಲು ಸಾಧ್ಯವಾಗದೆ ನೀರಿನಲ್ಲಿ ಸಿಲುಕಿ ಸಾವಪ್ಪಿದ್ದಾರೆ.
ಸುಕನ್ಯಾ ಅವರನ್ನು ಮಾತ್ರ ಜೀವಂತ ಉಳಿಸಲು ಸಾಧ್ಯವಾಗಿದೆ. ಉಳಿದ ಇಬ್ಬರು ಮುಳುಗಿ ಸಾವಪ್ಪಿದ್ದಾರೆ. ಮೃತರ ದೇಹಗಳನ್ನು ಶವಪರೀಕ್ಷೆಗಾಗಿ ಕಳುಹಿಸಲಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಸುಕನ್ಯಾ ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ತಿರುವಾರೂರು ಜಿಲ್ಲೆಯಲ್ಲಿ 'ನಯ್ಯಾಂಡಿ' ಚಿತ್ರೀಕರಣ ಭರದಿಂದ ಸಾಗುತ್ತಿತ್ತು. ಈ ದುರಂತ ಸಂಭವಿಸಿದ ಮೇಲೆ ಚಿತ್ರತಂಡ ಅಲ್ಲಿಂದ ಸ್ಥಳಾಂತರವಾಗಿದೆ. ಚಿತ್ರದ ನಿರ್ದೇಶಕ ಸರ್ಕೂನಂ ಅವರು ಚೆನ್ನೈಗೆ ವಾಪಸಾಗಿದ್ದಾರೆ.