Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿಂಪಲ್ ಸ್ಟಾರ್ ದಿಗಂತ್ 'ಒಂದೂರಲ್ಲಿ ಒಬ್ಬ ರಾಜ ಇದ್ದ'
ಮೀನಾತೂಗುದೀಪ ಶ್ರೀನಿವಾಸ್ ಈ ಚಿತ್ರದ ನಿರ್ಮಾಪಕರು. 'ಬುಲ್ ಬುಲ್' ಚಿತ್ರದ ಮೂಲಕ ತಂತ್ರಜ್ಞರನ್ನು ನಿರ್ಮಾಪಕರನಾಗಿ ಮಾಡಿದ ಖ್ಯಾತಿ ತೂಗುದೀಪ ಪ್ರೊಡಕ್ಷನ್ಸ್ ಸಂಸ್ಥೆಯದು. ಈ ಚಿತ್ರದ ಮೂಲಕ ಮಲ್ಲಿಕಾರ್ಜುನ್.ಬಿ.ಸಂಕನಗೌಡರ, ಚಿಂತನ್ ಹಾಗೂ ಶ್ರೀನಿವಾಸ್ ನಿರ್ಮಾಪಕರಾಗುತ್ತಿದ್ದಾರೆ.
'ಜೊತೆಜೊತೆಯಲಿ', 'ನವಗ್ರಹ' ಹಾಗೂ 'ಸಾರಥಿ'ಯಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಆಗಸ್ಟ್ ನಿಂದ ಆರಂಭವಾಗುವ ಈ ಚಿತ್ರಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಡಿಂಪಲ್ ಸ್ಟಾರ್ ದಿಗಂತ್ ಈ ಚಿತ್ರದ ನಾಯಕರಾಗಿದ್ದು, ರಚಿತಾ ರಾಮ್ (ಬುಲ್ ಬುಲ್) ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ವಿ.ಹರಿಕೃಷ್ಣರ ಸಂಗೀತ ನಿರ್ದೇಶನವಿದೆ. (ಬುಲ್ ಬುಲ್ ಚಿತ್ರ ವಿಮರ್ಶೆ ಓದಿ)
ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನಕಾರರಾಗಿದ್ದಾರೆ. ಮಲ್ಲಿಕಾರ್ಜುನ್.ಬಿ.ಸಂಕನಗೌಡರ ಸಹ ನಿರ್ದೇಶನವಿರುವ 'ಒಂದೂರಲ್ಲಿ ಒಬ್ಬ ರಾಜ ಇದ್ದ' ಚಿತ್ರಕ್ಕೆ ಚಿಂತನ್ ಸಂಭಾಷಣೆ ಬರೆಯುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)