Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಪಿಚೇಷ್ಟೆ' ಆರಂಭಿಸಿದ 'ಭಜರಂಗಿ' ನಿರ್ದೇಶಕ ಎ ಹರ್ಷ
ಯಶಸ್ವಿ ನಿರ್ದೇಶಕ ಎ.ಹರ್ಷ 'ಜೈ ಮಾರುತಿ 800' ಚಿತ್ರದ ಯಶಸ್ಸಿನ ನಂತರ ಇದೀಗ ಹೊಸಬರನ್ನು ಹಾಕಿಕೊಂಡು 'ಕಪಿಚೇಷ್ಟೆ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಆರಂಭವಾಗಿದ್ದು, ಹೊಸ ನಟ ಮೋಹನ್ ಎಂಬುವವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಡ್ಯಾನ್ಸ್ ಮಾಸ್ಟರ್ ಕಮ್ ಯಶಸ್ವಿ ನಿರ್ದೇಶಕ ಎ ಹರ್ಷ ಅವರು 'ಜೈ ಮಾರುತಿ 800' ಚಿತ್ರದ ನಂತರ ಇದೀಗ ಸದ್ದಿಲ್ಲದೇ ಮತ್ತೊಂದು ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಹೊಸ ಪ್ರತಿಭೆಗಳನ್ನು ಹಾಕಿಕೊಂಡು 'ಕಪಿಚೇಷ್ಟೆ' ಎಂಬ ಸಿನಿಮಾ ಮಾಡುತ್ತಿದ್ದಾರೆ.
ಸದಾ ಆಂಜನೇಯನ ಮೊರೆ ಹೋಗುವ ಹರ್ಷ ಅವರು, ಈ ಬಾರಿ ಮತ್ತೆ ಹೊಸ ಸಿನಿಮಾದಲ್ಲೂ ವಾಯುಪುತ್ರ ವೀರ ಆಂಜನೇಯನನ್ನು ನೆನಪಿಸಿಕೊಂಡಿದ್ದಾರೆ. ಈ ಮೊದಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಾಮಿಡಿ ಕಿಂಗ್ ಶರಣ್ ಮತ್ತಿತ್ತರ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಯಶಸ್ವಿಯಾಗಿದ್ದ ಹರ್ಷ ಅವರು ಈ ಬಾರಿ ಹೊಸಬರಿಗೆ ಮಣೆ ಹಾಕಿದ್ದಾರೆ.['ಭಜರಂಗಿ' ನಿರ್ದೇಶಕ ಹರ್ಷ ರವರ ಇದೆಂಥ 'ಕಪಿಚೇಷ್ಟೆ'?]
ತಮ್ಮ ಪರಿಚಯದ ಹುಡುಗ ಮೋಹನ್ ಎಂಬುವವರನ್ನು ಎ ಹರ್ಷ ಅವರು, 'ಕಪಿಚೇಷ್ಟೆ' ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ 'ತರ್ಲೆ ನನ್ಮಕ್ಳು' ಮತ್ತು 'ಪ್ರೀತಿಯ ರಾಯಭಾರಿ' ಖ್ಯಾತಿಯ ನಟಿ ಅಂಜನಾ ದೇಶಪಾಂಡೆ ಅವರು ಕಾಣಿಸಿಕೊಳ್ಳುತ್ತಿದ್ದಾರೆ.[ಮತ್ತೆ ಒಂದಾದ ಹರ್ಷ-ಶಿವಣ್ಣ, ಚಿತ್ರದ ಹೆಸರೇನು ಗೊತ್ತಾ?]
ರಾಶಿ ಕಂಬೈನ್ಸ್ ಅಡಿಯಲ್ಲಿ ಭಾಸ್ಕರ್ ರಾಶಿ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, 'ಜೈ ಮಾರುತಿ 800' ಚಿತ್ರಕ್ಕೆ ಕ್ಯಾಮೆರಾ ಕೈ ಚಳಕ ತೋರಿದ್ದ ಸ್ವಾಮಿ ಕೆ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ.
ಈಗಾಗಲೇ 'ಕಪಿಚೇಷ್ಟೆ' ಚಿತ್ರದ ಶೂಟಿಂಗ್ ಆರಂಭವಾಗಿದ್ದು, ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿದೆ.