Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಲಿಂಗದೇವರು ತಕರಾರು
2015ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಹೊಸ ತಕರಾರು ಆರಂಭವಾಗಿದೆ.
ಕರ್ನಾಟಕ ಸರ್ಕಾರವು ಕನ್ನಡ ಮತ್ತು ಕರ್ನಾಟಕದ ಪ್ರಾದೇಶಿಕ ಭಾಷೆಗಳಲ್ಲಿ ಉತ್ತಮ ಚಲನಚಿತ್ರಗಳ ನಿರ್ಮಾಣಕ್ಕೆ ಒತ್ತಾಸೆಯಾಗುವ, ಚಲನಚಿತ್ರ ಮಾಧ್ಯಮದ ಸೃಜನಶೀಲತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಉತ್ತೇಜಿಸುವ ಹಾಗೂ ಸಮಾಜಮುಖಿಯಾದ ಸದಭಿರುಚಿಯ ಪ್ರಯತ್ನಗಳನ್ನು ಗುರುತಿಸುವ, ಸದುದ್ದೇಶದಿಂದ ಕರ್ನಾಟಕ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿಗಳನ್ನು ಸ್ಥಾಪಿಸಿದೆ.[ನಿರ್ದೇಶಕ ಬಿ.ಎಸ್.ಲಿಂಗದೇವರು ವಿಶೇಷ ಸಂದರ್ಶನ]
ಪ್ರತೀ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ಜನವರಿ 1 ರಿಂದ ಡಿಸೆಂಬರ್ 31 ರೊಳಗಿನ ಅವಧಿಯಲ್ಲಿ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದ ಕನ್ನಡ ಮತ್ತು ಕರ್ನಾಟಕದ ಪ್ರಾದೇಶಿಕ ಭಾಷಾ ಚಿತ್ರಗಳು ಆಯಾ ವರ್ಷದ ಪ್ರಶಸ್ತಿಗಳಿಗೆ ಸ್ಪರ್ಧಿಸಲು ಅರ್ಹವಾಗಿರುತ್ತದೆ. ಹಾಗೂ, 2015ನೇ ಸಾಲಿನ ಕನ್ನಡ ಹಾಗು ಕರ್ನಾಟಕದ ಪ್ರಾದೇಶಿಕ ಭಾಷಾ ಚಲನಚಿತ್ರಗಳಿಗೆ ವಾರ್ಷಿಕ ಪ್ರಶಸ್ತಿಗಳನ್ನು ಆಯ್ಕೆ ಮಾಡಲು ಸಮಿತಿಯನ್ನು ನೇಮಿಸಿದೆ.
ಸದರಿ ಸಮಿತಿಯು ಕನ್ನಡ ಹಾಗೂ ಕರ್ನಾಟಕದ ಪ್ರಾದೇಶಿಕ ಭಾಷಾ ಚಲನಚಿತ್ರಗಳನ್ನು ವೀಕ್ಷಿಸಲು ಆರಂಭಿಸಿದೆ. ಪ್ರಶಸ್ತಿ ನೀಡಲು ರಚಿಸಿರುವ ನೀತಿ-ನಿಯಮ ಮತ್ತು ಮಾರ್ಗಸೂಚಿಗಳ ಅನುಸಾರ, ಡಿಜಿಟಲ್ ಫಾರ್ಮೆಟ್ ನಲ್ಲಿ Digibeta (Mixed audio track) ಮೂಲಕ ಚಲನಚಿತ್ರಗಳ ವೀಕ್ಷಣೆ ಮಾಡಬೇಕು.
ಆದರೆ, ಸದರಿ ಸಮಿತಿಯು BLURAY ಫಾರ್ಮೆಟ್ ನಲ್ಲಿ ಚಲನಚಿತ್ರ ವೀಕ್ಷಣೆ ಮಾಡುತ್ತಿರುವುದು ಮತ್ತು ನಿರ್ಮಾಪಕರು ಕೂಡ BLURAY ಫಾರ್ಮೆಟ್ ನಲ್ಲಿ ಅರ್ಜಿ ಸಲ್ಲಿಸಿರುವುದು 'ನಾನು ಅವನಲ್ಲ...ಅವಳು' [ವಿಮರ್ಶೆ: ನೋಡುಗರ ಪರಿಕಲ್ಪನೆ ಬದಲಾಯಿಸುವ 'ನಾನು ಅವನಲ್ಲ...ಅವಳು'] ನಿರ್ದೇಶಕ ಬಿ.ಎಸ್.ಲಿಂಗದೇವರು ಗಮನಕ್ಕೆ ಬಂದಿದ್ದು, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸರ್ಕಾರವು ರೂಪಿಸಿರುವ ನೀತಿ-ನಿಯಮ ಮತ್ತು ಮಾರ್ಗಸೂಚಿಗಳ ಉಲ್ಲಂಘನೆಯಾಗಿರುವ ಕಾರಣ, ತಕ್ಷಣ ಚಲನಚಿತ್ರಗಳ ವೀಕ್ಷಣೆ ರದ್ದುಗೊಳಿಸಬೇಕು ಅಂತ ತಮ್ಮ ಪತ್ರದಲ್ಲಿ ಬಿ.ಎಸ್.ಲಿಂಗದೇವರು ಮನವಿ ಮಾಡಿದ್ದಾರೆ. ನಿರ್ದೇಶಕ ಬಿ.ಎಸ್ ಲಿಂಗದೇವರು ಸರ್ಕಾರಕ್ಕೆ ಬರೆದಿರುವ ಪತ್ರ 'ಫಿಲ್ಮಿಬೀಟ್ ಕನ್ನಡ'ಗೆ ಲಭ್ಯವಾಗಿದೆ ನೋಡಿ....