Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರಿ ಚಿರತೆಗೆ ಆಕ್ಷನ್-ಕಟ್ ಹೇಳ್ತಾರಂತೆ, 'ಭಜರಂಗಿ' ಹರ್ಷ.!
ಇದೇ ಮೊದಲ ಬಾರಿಗೆ ನೃತ್ಯ ನಿರ್ದೇಶಕ ಕಮ್ ನಿರ್ದೇಶಕ ಹರ್ಷ ಅವರು ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ಅವರಿಗೆ ಆಕ್ಷನ್-ಕಟ್ ಹೇಳಲು ತಯಾರಾಗಿದ್ದಾರೆ. ದುನಿಯಾ ವಿಜಿ ಹಾಗೂ ಖ್ಯಾತ ನಿರ್ದೇಶಕ ಹರ್ಷ ಅವರ ಕಾಂಬಿನೇಷನ್ ನಲ್ಲಿ ಹೊಸ ಚಿತ್ರವೊಂದು ಸೆಟ್ಟೇರುತ್ತಿದೆ.
'ಕೆ.ಪಿ ಶ್ರೀಕಾಂತ್ ನಿರ್ಮಾಣದಲ್ಲಿ ನನ್ನ ಹೊಸ ಚಿತ್ರಕ್ಕೆ, ನಿರ್ದೇಶಕ ಎ.ಹರ್ಷ ಅವರು ನಿರ್ದೇಶನ ಮಾಡುತ್ತಿದ್ದು, ನಾನು ಸೇರಿ ಮೂವರ ಸಂಯೋಜನೆ ವಿಭಿನ್ನವಾಗಿ ಮೂಡಿ ಬರಲಿದೆ. ಚಂದನವನದ ಖ್ಯಾತ ನೃತ್ಯ ನಿರ್ದೇಶಕ ಕಮ್ ನಿರ್ದೇಶಕ ಎ.ಹರ್ಷ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಹೊಸ ಅನುಭವ ನೀಡಲಿದೆ ಎಂದು ಕರಿ ಚಿರತೆ ದುನಿಯಾ ವಿಜಯ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.[ಚಿತ್ರಗಳು: ಭರ್ಜರಿಯಾಗಿ ದನ ಕಾಯುತ್ತಿರುವ ವಿಜಿ ಮತ್ತು ಪ್ರಿಯಾಮಣಿ..!]
ನಿರ್ಮಾಪಕ ಶ್ರೀಕಾಂತ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೊದಲ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರದ ಸ್ಕ್ರಿಪ್ಟ್ ತಯಾರಾಗುತ್ತಿದೆ ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ.
ಇನ್ನು ನಟ ದುನಿಯಾ ವಿಜಯ್ ಅವರು ಯೋಗರಾಜ್ ಭಟ್ಟರ 'ದನ ಕಾಯೋನು' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾದರೆ, ನಿರ್ದೇಶಕ ಹರ್ಷ ಅವರು ಕಾಮಿಡಿ ನಟ ಶರಣ್ ಅವರ ಜೊತೆ 'ಜೈ ಮಾರುತಿ 800' ಚಿತ್ರದ ಚಿತ್ರೀಕರಣದಲ್ಲಿದ್ದಾರೆ.['ಜೈ ಮಾರುತಿ 800' ಫುಲ್ ಕಾಮಿಡಿ ಸಿನಿಮಾ: ಎ ಹರ್ಷ]
ಒಟ್ನಲ್ಲಿ ದುನಿಯಾ ವಿಜಿ ಮತ್ತು ಹರ್ಷ ಅವರ ಬಹುನಿರೀಕ್ಷಿತ ಪ್ರಾಜೆಕ್ಟ್ ಗಳು ಮುಗಿದ ನಂತರ, ಇವರಿಬ್ಬರ ಜುಗಲ್ ಬಂದಿಯಲ್ಲಿ ಹೊಸ ಪ್ರಾಜೆಕ್ಟ್ ಸೆಟ್ಟೇರಲಿದೆ.