Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಕನ್ನಡ ಚಿತ್ರನಿರ್ದೇಶನದತ್ತ ಒಲವು ತೋರಿಸಿದ ಮಣಿರತ್ನಂ
ಖ್ಯಾತ ನಿರ್ದೇಶಕ ಮಣಿರತ್ನಂ ಎಲ್ಲರಿಗೂ ಗೊತ್ತು, ಅವರು ತಮ್ಮ ಸಿನಿ ವೃತ್ತಿ ಜೀವನವನ್ನು ಆರಂಭಿಸಿದ್ದು ಸ್ಯಾಂಡಲ್ ವುಡ್ ಕ್ಷೇತ್ರದಿಂದ. 1980 ರಲ್ಲಿ ಕನ್ನಡದಲ್ಲಿ 'ಪಲ್ಲವಿ ಅನುಪಲ್ಲವಿ' ಎಂಬ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕರ ಪಟ್ಟ ಹೊತ್ತುಕೊಂಡರು.
ಆದರೆ ನಿರ್ದೇಶಕ ಮಣಿರತ್ನಂ ಅವರು ತಮ್ಮ ಮೊದಲ ಚಿತ್ರದಲ್ಲಿಯೇ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡರಾದರೂ ಆನಂತರ ಅವರು ಯಾವುದೇ ಕನ್ನಡ ಸಿನಿಮಾಗಳನ್ನು ನಿರ್ದೇಶಿಸಲಿಲ್ಲ. ಇದೀಗ ಅದೇ 'ಪಲ್ಲವಿ ಅನುಪಲ್ಲವಿ' ಮಣಿರತ್ನಂ ಅವರು ಕನ್ನಡ ಸಿನಿಮಾ ಮಾಡುವ ಸೂಚನೆ ನೀಡಿದ್ದಾರೆ.[ಜಯಾ ಬಚ್ಚನ್ 'ಬೆಂಗಳೂರು ಆಗಲ್ಲ' ಅಂದಿದ್ದಕ್ಕೆ ರೆಬೆಲ್ ಸ್ಟಾರ್ ಏನಂದ್ರು]
8ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ನಿರ್ದೇಶಕ ಮಣಿರತ್ನಂ ಭಾಗವಹಿಸಿದ್ದ ಸಂದರ್ಭದಲ್ಲಿ, ಕನ್ನಡದಲ್ಲಿ ಚಿತ್ರ ನಿರ್ದೇಶಿಸುವ ಕುರಿತು ಕೇಳಲಾದ ಪ್ರಶ್ನೆಗೆ ಮಣಿರತ್ನಂ ಅವರು 'ಎಲ್ಲವೂ ಕೂಡಿ ಬಂದರೆ ಆದಷ್ಟು ಬೇಗ ಒಂದು ಕನ್ನಡ ಸಿನಿಮಾ ಮಾಡುವುದಾಗಿ' ಮಣಿರತ್ನಂ ಅವರು ಒಪ್ಪಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಅವರು ಮಣಿರತ್ನಂ ಅವರು ಕನ್ನಡದಲ್ಲಿ ಚಿತ್ರವನ್ನೇನಾದರೂ ನಿರ್ದೇಶಿಸಿದರೆ ತಾವೇ ನಿರ್ಮಾಣದ ಜವಾಬ್ದಾರಿ ಹೊತ್ತುಕೊಳ್ಳುವುದಾಗಿ ತಿಳಿಸಿದ್ದಾರೆ.[ಚಿತ್ರಗಳು: ಅದ್ಧೂರಿಯಾಗಿ ಉದ್ಘಾಟನೆಗೊಂಡ ಸಿನಿಮೋತ್ಸವ]
ಒಟ್ನಲ್ಲಿ ನಿರ್ದೇಶಕ ಮಣಿರತ್ನಂ ಅವರು ಮತ್ತೆ ಕನ್ನಡದಲ್ಲಿ ನಿರ್ದೇಶನ ಮಾಡಿದರೆ, ಕನ್ನಡ ಸಿನಿಪ್ರೀಯರಿಗೆ ಮತ್ತೊಮ್ಮೆ ಒಂದು ಉತ್ತಮ ಸಿನಿಮಾ ಮತ್ತು ಭರ್ಜರಿ ಮನೋರಂಜನೆ ಸಿಗೋದು ಗ್ಯಾರೆಂಟಿ.