Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಂತೆ 'ದಿ ಗ್ರೇಟ್' ವರ್ಮಾ
ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇನ್ನೇನು ಸದ್ಯದಲ್ಲಿಯೇ ಟಾಲಿವುಡ್ ಕ್ಷೇತ್ರಕ್ಕೆ ಟಾಟಾ ಬಾಯ್ ಬಾಯ್ ಹೇಳ್ತಾರಂತೆ. ತೆಲುಗಿನಲ್ಲಿ 'ವಂಗವೀಟಿ' ಸಿನಿಮಾ ನನ್ನ ಕೊನೆಯ ಸಿನಿಮಾ ಆಗಲಿದೆ. ತದನಂತರ ನಾನು ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳುತ್ತೇನೆ ಎಂದು ಖುದ್ದು ಆರ್.ಜಿ.ವಿ ಘೋಷಿಸಿದ್ದಾರೆ.
ತೆಲುಗಿನ 'ವಂಗವೀಟಿ' ಚಿತ್ರ ನೈಜ ಕಥೆಯನ್ನಾಧರಿಸಿದ್ದು, 1980ರ ದಶಕದಲ್ಲಿ ವಿಜಯವಾಡದಲ್ಲಿ ಉದ್ಭವಿಸಿದ ರೌಡಿಸಂ ಕುರಿತಾಗಿರುವ ರೋಚಕ ಕಥೆಯನ್ನು ಹೊಂದಿದೆಯಂತೆ.['ಅಂಡರ್ ವರ್ಲ್ಡ್ ಡಾನ್' ಗಳ ಬೆನ್ನತ್ತಿದ ನಿರ್ದೇಶಕ ಆರ್.ಜಿ.ವಿ]
'ವಂಗವೀಟಿ' ಸಿನಿಮಾದ ಕಥೆ ಎಷ್ಟು ನೈಜತೆಯಿಂದ ಕೂಡಿದೆ ಎಂದರೆ, ತೆಲುಗಿನಲ್ಲಿ ಸಿನಿಮಾ ಮಾಡುವುದಕ್ಕೆ ಇದಕ್ಕಿಂತಲೂ ಅತ್ಯುತ್ತಮ ಕಥೆಯನ್ನು ನನಗೆ ಚಿಂತಿಸಲು ಸಾಧ್ಯವಿಲ್ಲ. ಈ ಅದ್ಭುತ ಸಿನಿಮಾದಿಂದಲೇ ನನ್ನ ತೆಲುಗು ಚಿತ್ರರಂಗದ ದೀರ್ಘ ಕಾಲದ ಜರ್ನಿಯನ್ನು ಮುಗಿಸಬೇಕೆಂದುಕೊಂಡಿದ್ದೇನೆ. ಆದ್ದರಿಂದ 'ವಂಗವೀಟಿ' ತೆಲುಗಿನಲ್ಲಿ ನನ್ನ ಕೊನೆಯ ಚಿತ್ರವಾಗಲಿದೆ' ಎಂದು ಸ್ವತಃ ವರ್ಮಾ ಅವರೇ ಹೇಳಿಕೆ ನೀಡಿದ್ದಾರೆ.[ಹಾಲಿವುಡ್ ನಲ್ಲೂ 'ವೀರಪ್ಪನ್' ಹವಾ ಶುರು ಮಾಡ್ತಾರಂತೆ ವರ್ಮಾ]
ವಿಜಯವಾಡದ ರೌಡಿಸಂ ಸುತ್ತ ಸುತ್ತುವ ಸಿನಿಮಾದ ಕಥೆ, ಚಲಸಾನಿ ವೆಂಕಟರತ್ನಂನನ್ನು 'ವಂಗವೀಟಿ' ರಾಧ ಕೊಲ್ಲುವುದರೊಂದಿಗೆ ಪ್ರಾರಂಭವಾಗಿ, ವಂಗವೀಟಿ ರಂಗನ ಸಾವಿನೊಂದಿಗೆ ಹೇಗೆ ಎಲ್ಲವೂ ಅಂತ್ಯವಾಗುತ್ತದೆ ಎಂಬುದನ್ನು ಕಥೆ ಒಳಗೊಂಡಿದೆ.
ಇನ್ನು ನಿರ್ದೇಶಕ ವರ್ಮಾ ಅವರು ವಿಜಯವಾಡದಲ್ಲಿ ತಾವು ಬೆಳೆಯುತ್ತಿದ್ದ ಸಂದರ್ಭದಲ್ಲಿ ಅವರ ಅನುಭವವನ್ನೇ ಕಥೆಯ ಹೆಚ್ಚಿನ ಭಾಗವಾಗಿ ಆಯ್ದುಕೊಂಡಿದ್ದಾರಂತೆ.[ರಾಮ್ಗೋಪಾಲ್ ವರ್ಮಾ ಹೇಳಿದ ವೀರಪ್ಪನ್ ಸಾವಿನ ಕತೆ]
ಒಟ್ನಲ್ಲಿ 'ಕಿಲ್ಲಿಂಗ್ ವೀರಪ್ಪನ್' ಮೂಲಕ ಕನ್ನಡಕ್ಕೂ ಪಾದಾರ್ಪಣೆ ಮಾಡಿದ್ದ ನಿರ್ದೇಶಕ ವರ್ಮಾ ಅವರು ಸದ್ಯಕ್ಕೆ ತೆಲುಗು ಕ್ಷೇತ್ರದಿಂದ ನಿವೃತ್ತಿ ತೆಗೆದುಕೊಂಡು ಬಾಲಿವುಡ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಆಲೋಚನೆ ಮಾಡಿದ್ದಾರೆ.