Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
16 ವರ್ಷಗಳ ನಂತರ ಎಸ್ ನಾರಾಯಣ್ ನಿರ್ದೇಶನದಲ್ಲಿ ರವಿಮಾಮ
ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಲವರ್ ಬಾಯ್ ಆಗಿ ಕ್ರೇಜಿ ಸ್ಟಾರ್ ಅಂತಾನೇ ಫೇಮಸ್ ಆಗಿದ್ದ ನಟ ರವಿಚಂದ್ರನ್ ಅವರು ಇತ್ತೀಚೆಗೆ ತಂದೆಯ ಪಾತ್ರಗಳನ್ನು ಮಾಡುವ ಮೂಲಕ ಮತ್ತೆ ಮರುಹುಟ್ಟು ಪಡೆದುಕೊಂಡವರು.
ಇದೀಗ ನಿರ್ದೇಶಕ-ನಟ ಎಸ್ ನಾರಾಯಣ್ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಆಕ್ಷನ್-ಕಟ್ ಹೇಳಲಿದ್ದಾರೆ. ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಎಸ್ ನಾರಾಯಣ್ ಹಾಗೂ ನಟ ರವಿಚಂದ್ರನ್ ಅವರು ಸುಮಾರು 16 ವರ್ಷಗಳ ನಂತರ ಮತ್ತೆ ಒಂದಾಗಿ ಕೆಲಸ ಮಾಡಲು ನಿರ್ಧರಿಸಿದ್ದು, ಇವರಿಬ್ಬರ ಜುಗಲ್ ಬಂದಿಯಲ್ಲಿ ಪ್ರೇಕ್ಷಕರಿಗೆ ಮತ್ತೊಮ್ಮೆ ಎಂರ್ಟಟೈನ್ ಗ್ಯಾರಂಟಿ.
ಇನ್ನು ಈಗಲೂ ನಾಯಕ ನಟನ ಪಾತ್ರಗಳನ್ನು ಮಾಡಲು ಅವಕಾಶ ಪಡೆಯುವಲ್ಲಿ ಮುಂಚೂಣಿ ಸ್ಥಾನದಲ್ಲಿರುವ ನಟ ರವಿಚಂದ್ರನ್ ಅವರ ಹುಮ್ಮಸ್ಸು ಹಾಗು ಖದರ್ ಗೆ ನಾವು ಮೆಚ್ಚಲೇಬೇಕು.
ವಿಜಯವಾಡ ಮೂಲದ ನಿರ್ಮಾಪಕ ಸುಬ್ರಮಣಿಯನ್ ಅವರು ಸಿನಿಮಾಕ್ಕೆ ಕಥೆ ಸಿದ್ದಪಡಿಸಿದ್ದು, ಸೋಮವಾರದಂದು ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಸಿನಿಮಾಕ್ಕೆ ಇನ್ನು ಹೆಸರಿಡಬೇಕಿದ್ದು, ನವೆಂಬರ್ 3 ಅಥವಾ 4 ರಂದು ಚಿತ್ರೀಕರಣ ಆರಂಭವಾಗಲಿದೆ.
ಇನ್ನು ಹೆಸರಿಡದ ಚಿತ್ರದಲ್ಲಿ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ವಿಶೇಷ ಹಾಗೂ ವಿಶಿಷ್ಟ ಪಾತ್ರವಿದೆ. ಇನ್ನುಳಿದಂತೆ ಚಿತ್ರಕ್ಕೆ ಇನ್ನು ಹೆಚ್ಚಿನ ನಟ-ನಟಿಯರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ನಿರ್ದೇಶಕ ಎಸ್.ನಾರಾಯಣ್ ಅವರು ಹೇಳಿದ್ದಾರೆ.
ನಟ ರವಿಚಂದ್ರನ್ ಅವರು ಈ ಚಿತ್ರದಲ್ಲಿ ಮಾಡುವ ರೋಲ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಅವರ ಸಿನಿ ಕೆರಿಯರ್ ನಲ್ಲಿ ಇಲ್ಲಿಯವರೆಗೆ ಮಾಡದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ರವಿಮಾಮ' ಚಿತ್ರದ ನಂತರ ರವಿಚಂದ್ರನ್ ಅವರೊಂದಿಗೆ ಮತ್ತೊಮ್ಮೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ನಿರ್ದೇಶಕ ಎಸ್.ನಾರಾಯಣ್ ನುಡಿದಿದ್ದಾರೆ.[ನಿರ್ದೇಶಕ ಎಸ್.ನಾರಾಯಣ್ ಮುಂದಿನ ಚಿತ್ರ ಯಾವ್ದು?]
ಸದ್ಯಕ್ಕೆ ನಟ ರವಿಚಂದ್ರನ್ ಅವರು ತಾವೇ ನಿರ್ದೇಶಿಸಿ ನಟಿಸುತ್ತಿರುವ 'ಅಪೂರ್ವ' ಚಿತ್ರ ಕೊನೆಯ ಹಂತದಲ್ಲಿದೆ. ಇದೀಗ ಮಾಹಿತಿ ಪ್ರಕಾರ ಆದಷ್ಟು ಬೇಗನೇ ನಟ ರವಿಚಂದ್ರನ್ ಅವರು ಎಸ್ ನಾರಾಯಣ್ ಅವರ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.