Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ರಿಗೆ ಮತ್ತೆ ಲವ್ ಆಯ್ತಂತೆ..!
ಲವ್ ಸ್ಟೋರಿಗಳಿಗೆ ಅದ್ಭುತ ಸ್ಪರ್ಶ ನೀಡುವ 'ಮುಂಗಾರು ಮಳೆ' ನಿರ್ದೇಶಕ ಯೋಗರಾಜ್ ಭಟ್ ಅವರು ಮತ್ತೆ ತಮ್ಮ ಹಳೇ ಟ್ರ್ಯಾಕ್ ಗೆ ಮರಳಿದ್ದಾರೆ. ಇದೀಗ ಲವ್ ಸ್ಟೋರಿ ಸ್ಕ್ರಿಪ್ಟ್ ಗಳನ್ನು ಹೊತ್ತು ಮತ್ತೆ ವಾಪಸಾಗಿದ್ದಾರೆ.
'ಮುಂಗಾರು ಮಳೆ' 'ಗಾಳಿಪಟ' ದಂತಹ ರೊಮ್ಯಾಂಟಿಕ್ ಲವ್ ಸಿನಿಮಾಗಳನ್ನು ಕೊಡುಗೆಯಾಗಿ ನೀಡಿದ ಭಟ್ರು ಇದನ್ನು ಮೀರಿ 'ಡ್ರಾಮಾ' ಹಾಗೂ 'ವಾಸ್ತು ಪ್ರಕಾರ' ದಂತಹ ಸಿನಿಮಾಗಳನ್ನು ಪ್ರೇಕ್ಷಕರಿಗೆ ನೀಡಿದ್ದರು.
ಸದ್ಯಕ್ಕೆ ದುನಿಯಾ ವಿಜಿ ಹಾಗೂ ಪ್ರಿಯಾಮಣಿ ಕಾಣಿಸಿಕೊಂಡಿರುವ 'ದನ ಕಾಯೋನು' ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, 'ಗಾಳಿಪಟ' ಚಿತ್ರದ ನಂತರ ಮತ್ತೆ ಲವ್ ಮೂಡ್ ಗೆ ಬಂದಿದ್ದೇನೆ ಎನ್ನುತ್ತಾರೆ ಯೋಗರಾಜ ಭಟ್ರು.[ಯೋಗರಾಜ್ ಭಟ್- ದುನಿಯಾ ಸೂರಿ ನಡುವೆ ಮತ್ತೆ ಫೈಟ್]
'ಪ್ರೀತಿಯ ಕಥೆಗಳು ಕ್ಲೀಶೆಯಾಗಿರುವುದರಿಂದ ಬೇರೆ ಬೇರೆಯದ್ದನ್ನು ಪ್ರಯತ್ನಿಸಿದ್ದಾಗಿ ತಿಳಿಸುವ ಯೋಗರಾಜ ಭಟ್ಟರು 'ಯಾವುದೋ ಒಂದು ಐಡಿಯಾ ತಲೆಯಲ್ಲಿ ಹೊಳೆದು ಮತ್ತೆ ಪ್ರೇಮ ಕಥೆಯನ್ನು ಬರೆಯಲು ಪ್ರಾರಂಭಿಸಿದೆ. ಸದ್ಯಕ್ಕೆ 'ದನಕಾಯೋನು' ಮುಗಿದಿರುವುದರಿಂದ ಹೊಸ ಸ್ಕ್ರಿಪ್ಟ್ ಮೇಲೆ ಕೆಲಸ ಆರಂಭಿಸಬಹುದು ಎಂದು ತಿರ್ಮಾನಿಸಿದ್ದೇನೆ' ಎನ್ನುತ್ತಾರೆ ನಿರ್ದೇಶಕ ಯೋಗರಾಜ ಭಟ್ರು.
ಇನ್ನು ವಿಶೇಷವಾಗಿ ಈ ಲವ್ ಸಿನಿಮಾದ ಮೂಲಕ ಆಕಾಶ್ ನಾಗಪಾಲ್ ಎಂಬ ಯುವ ನಟನನ್ನು ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಪರಿಚಯಿಸಲಿದ್ದಾರಂತೆ ನಮ್ಮ ಭಟ್ರು. ಕಲಾ ನಿರ್ದೇಶಕ ಶಶಿಧರ್ ಅಡಪ ಅವರ ಸೂಚನೆಯ ಮೇರೆಗೆ ಆಕಾಶ್ ಅವರನ್ನು ನಾಯಕ ನಟನಾಗಿ ತೊಡಗಿಸಿಕೊಳ್ಳಲಿದ್ದಾರಂತೆ. ಜೊತೆಗೆ ಇಬ್ಬರು ನಾಯಕ ನಟಿಯರು ಇರಲಿದ್ದಾರೆ ಎಂದು ಭಟ್ಟರು ತಿಳಿಸಿದ್ದಾರೆ.[ಯಾವುದೇ ಕಟ್ಸ್ ಇಲ್ಲದೆ ಸೆನ್ಸಾರ್ ಪಾಸ್ ಆದ ಭಟ್ರ 'ಪರಪಂಚ']
ಒಟ್ನಲ್ಲಿ ಮಳೆ ಆಯ್ತು, ಗಾಳಿಪಟ ಆಯ್ತು, ಇನ್ಯಾವ ಹೊಸ ಲವ್ ಸ್ಟೋರಿಯನ್ನು ಭಟ್ರು ತೆರೆ ಮೇಲೆ ತರ್ತಾರೆ ಅಂತ ಕಾದು ನೋಡೋಣ.