Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಗಳವಾರ ನಟ ಸಾರ್ವಭೌಮ ಡಾ.ರಾಜ್ ಅವರ 10ನೇ ಪುಣ್ಯತಿಥಿ
ಕನ್ನಡದ ನಟ ಸಾರ್ವಭೌಮ, ವರನಟ, ಕನ್ನಡದ ಮೇರು ನಟ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದಿರುವ-ಕದ್ದಿರುವ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ಅವರು ನಮ್ಮೆಲ್ಲರನ್ನು ಅಗಲಿ ನಾಳೆಗೆ (ಏಪ್ರಿಲ್ 12) ಭರ್ತಿ 10 ವರ್ಷಗಳಾಗುತ್ತಿವೆ.
ನಾಳೆ (ಏಪ್ರಿಲ್ 12) ಡಾ.ರಾಜ್ ಕುಮಾರ್ ಅವರ ಪವಿತ್ರ ಸಮಾಧಿ ಇರುವ ಸ್ಥಳವಾದ ಕಂಠೀರವ ಸ್ಟುಡಿಯೋದಲ್ಲಿ, ಅವರ ಸ್ಮಾರಕಕ್ಕೆ ಡಾ.ರಾಜ್ ಕುಟುಂಬದವರು ಹಾಗೂ ಲಕ್ಷಾಂತರ ಅಭಿಮಾನಿಗಳು ನಮನ ಸಲ್ಲಿಸಲಿದ್ದಾರೆ.[ಡಾ.ರಾಜ್ ಕುಮಾರ್ 9 ನೇ ಪುಣ್ಯತಿಥಿಗೆ ಜನಸಾಗರ]
ಪ್ರತೀ ವರ್ಷದಂತೆ ಈ ವರ್ಷ ಕೂಡ ಸ್ಮಾರಕಕ್ಕೆ ನಮನ ಸಲ್ಲಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಅವರ ಹೆಸರಿನಲ್ಲಿ ಅನ್ನ ಸಂತರ್ಪಣೆ ನೆರವೇರಲಿದ್ದು, ತದನಂತರ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.[ಧ್ರುವತಾರೆ ಡಾ.ರಾಜ್ ಕುಮಾರ್ ಪುಣ್ಯಸ್ಮರಣೆ]
ಚಲನಚಿತ್ರ ಸಂಘದ ಹಲವಾರು ಗಣ್ಯರು ಹಾಗೂ ಸ್ಯಾಂಡಲ್ ವುಡ್ ನ ಸ್ಟಾರ್ ನಟ-ನಟಿಯರು ನಾಳೆ ಪುಣ್ಯತಿಥಿ ಸಮಾರಂಭದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಭಾಗವಹಿಸಲಿದ್ದು, ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಲಿದ್ದಾರೆ.