twitter
    For Quick Alerts
    ALLOW NOTIFICATIONS  
    For Daily Alerts

    ಕರ್ನಾಟಕ ಕರ್ಣನಿಗೆ ಹುಟ್ಟುಹಬ್ಬ ಶುಭಾಶಯಗಳು

    By Rajendra
    |

    ಕರ್ನಾಟಕದ ಕರ್ಣ, ಬಂಗಾರದ ಕಳಸ, ಸಿಂಹಾದ್ರಿಯ ಸಿಂಹ, ಸಾಹಸ ಸಿಂಹ, ಕರುನಾಡ ಜಮೀನ್ದಾರ್ರು, ಅಭಿನಯ ಭಾರ್ಗವ... ಮುಂತಾದ ಬಿರುದುಗಳನ್ನು ತಮ್ಮ ಅಭಿಮಾನಿ ದೇವರುಗಳಿಂದ ಪಡೆದ ಡಾ.ವಿಷ್ಣುವರ್ಧನ್ ಅವರ ಜನುಮ ದಿನ ಇಂದು.

    ಯುಗ ಯುಗಳೇ ಸಾಗಲಿ ಡಾ.ವಿಷ್ಣುವರ್ಧನ್ ಅವರ ನೆನೆಪು ಶಾಶ್ವತ. ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಶಾಶ್ವತ ಸ್ಥಾನ ಪಡೆದ ಮಹಾನ್ ಕಲಾವಿದನಿಗೆ ಬುಧವಾರ (ಸೆ.18) 63ನೇ ಜನುಮ ದಿನ ಸಂಭ್ರಮ. ಇಂದು ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಅಭಿಮಾನಿಗಳ ಕಲರವ ಅಂಬರ ಚುಂಬಿಸುತ್ತಿದೆ.

    ಕನ್ನಡ ಚಿತ್ರರಂಗದ 'ಯಜಮಾನ' ಇಂದು ಅಭಿಮಾನಿಗಳ ನಡುವೆ ಇಲ್ಲದಿದ್ದರೂ ಅವರ ಆಶೀರ್ವಾದ ಸದಾ ಕನ್ನಡ ಚಿತ್ರರಂಗದ ಮೇಲೆ ಸದಾ ಇದ್ದೇ ಇರುತ್ತದೆ. ಈ ಬಾರಿಯ ವಿಷ್ಣು ಹುಟ್ಟುಹಬ್ಬಕ್ಕೆ ಎಂದಿಗಿಂತಲೂ ಹೆಚ್ಚಾಗಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಹೆಚ್ ಆರ್ ಭಾವದ್ವಾಜ್ ಅವರು ಅಭಿಮಾನ್ ಸ್ಟುಡಿಯೋಗೆ ಆಗಮಿಸಿ ಹುಟ್ಟುಹಬ್ಬ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಬಾರಿಯೂ ಅಭಿಮಾನಿಗಳು ರಕ್ತದಾನ, ನೇತ್ರದಾನದಂತಹ ಹಲವಾರು ಕಾರ್ಯಕ್ರಗಳನ್ನು ಹಮ್ಮಿಕೊಂಡಿದ್ದಾರೆ.

    ರೋಟರಿ ಇಂಟರ್ ನ್ಯಾಶನಲ್, ನಾರಾಯಣ ಹೆಲ್ತ್, ಪ್ರಾಜೆಕ್ಟ್ ದೃಷ್ಟಿ, ರಾಷ್ಟ್ರೋತ್ಥಾನ ಪರಿಷತ್ ನಂತಹ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿದ್ದು ಉಚಿತ ಆರೋಗ್ಯ ತಪಾಸಣೆಯನ್ನೂ ಮಾಡಲಾಗುತ್ತಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋಗೆ ಆಗಮಿಸುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)

    English summary
    The 63rd birth anniversary celebrations of late Kannada actor Dr. Vishnuvardhan held on 18th September 2013 at different locations in Bangalore. The different fans clubs of Vishnu has organised blood donation, eye donation and free ailment programmes. Honourable Governor of Karnataka, HR Bharadwaj himself will visit the samadhi memorial of Vishnuvardhan at Abhiman Studio campus in Kengeri to be part of the celebrations.
    Wednesday, September 18, 2013, 10:00
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X