Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿನ್ನಿಸ್ ದಾಖಲೆಯತ್ತ ಸಾಹಸಸಿಂಹ 'ಖೈದಿ' ಕಟೌಟ್
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಚಿತ್ರಗಳನ್ನು ಇಂದಿಗೂ ಅವರ ಅಭಿಮಾನಿಗಳು ಮುಗಿಬಿದ್ದು ನೋಡುತ್ತಾರೆ ಎಂಬುದಕ್ಕೆ ಇತ್ತೀಚೆಗೆ ತೆರೆಕಂಡ ಅವರ ಹಳೆಯ ಚಿತ್ರ 'ಖೈದಿ' ಸಾಕ್ಷಿ. ಈ ಚಿತ್ರ ಬಾಕ್ಸ್ ಆಫೀಸಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತ್ರಿವೇಣಿ ಚಿತ್ರಮಂದಿರದಲ್ಲಿ ಕಲೆಕ್ಷನ್ ಇನ್ನೂ ನಯಾಪೈಸೆಯಷ್ಟೂ ಕಡಿಮೆಯಾಗಿಲ್ಲ.
ಇದೀಗ ವಿಷ್ಣು ಅಭಿಮಾನಿಗಳಿಗೆ ಇಷ್ಟವಾದ ಮತ್ತೊಂದು ಸುದ್ದಿ ಬಂದಿದೆ. ಅದೇನೆಂದರೆ ತ್ರಿವೇಣಿ ಚಿತ್ರಮಂದಿರದ ಮುಂದೆ ನಿಲ್ಲಿಸಿರುವ ಭಾರಿ ಕಟೌಟ್ ಈಗ ಗಿನ್ನಿಸ್ ಹಾಗೂ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಗೆ ಶೀಘ್ರದಲ್ಲೇ ಸೇರ್ಪಡೆಯಾಗಲು ಸಿದ್ಧವಾಗಿದೆ. [ಸಾಹಸಸಿಂಹ ವಿಷ್ಣುವರ್ಧನ್ 'ಖೈದಿ' ರೀ ರಿಲೀಸ್]
ಈ ರೀತಿಯ ಪ್ರಶಸ್ತಿಗಗಳಿಗೆ ಏಕಕಾಲಕ್ಕೆ ಪಾತ್ರರಾಗುತ್ತಿರುವ ಮೊದಲ ನಟನಾಗಿ ವಿಷ್ಣುವರ್ಧನ್ ಅವರು ಹೊರಹೊಮ್ಮಿದ್ದಾರೆ. ಈಗಾಗಲೆ ಫೋಟೋ ಜರ್ನಲಿಸ್ಟ್ ಜನಾರ್ಧನ ರಾವ್ ಸಾಳಂಕೆ ಅವರು ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನೂ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್ ಹಾಗೂ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ , ಗುರಗಾಂವ್ ಗೆ ಕಳುಹಿಸಿದ್ದಾರೆ.
ಬೆಂಗಳೂರಿನ ಅಪರ್ಣಾ ಚಿತ್ರಮಂದಿರದಲ್ಲಿ ನವೆಂಬರ್ 15ರಂದು ಖೈದಿ ಚಿತ್ರ ಬಿಡುಗಡೆಯಾಗುತ್ತಿದೆ. ಕೆಎಸ್ ಆರ್ ದಾಸ್ ನಿರ್ದೇಶನದ ಈ ಚಿತ್ರವನ್ನು ಜಿಆರ್ ಕೆ ರಾಜು ಅವರು ವಿಶ್ವಚಿತ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದರು. ಚಿತ್ರ ಬಿಡುಗಡೆ ಕಂಡಿದ್ದು 1984ರಲ್ಲಿ.
ತೆಲುಗಿನ 'ಖೈದಿ' ಚಿತ್ರದ ರೀಮೇಕ್ ಇದು. ಮೂಲ ಚಿತ್ರದಲ್ಲಿ ಚಿರಂಜೀವಿ ಹಾಗೂ ಮಾಧವಿ ಮುಖ್ಯ ಪಾತ್ರಧಾರಿಗಳು. ಈ ಚಿತ್ರದ "ತಾಳೆ ಹೂವ ಪೊದೆಯಿಂದ..." (ಚಿ.ಉದಯಶಂಕರ್ ಸಾಹಿತ್ಯ) ಹಾಡು ಆಗಿನ ಕಾಲಕ್ಕೆ ಬುಸ್ ಬುಸ್ ಎಂದು ಸಾಕಷ್ಟು ಸದ್ದು ಮಾಡಿತ್ತು.
ಚಕ್ರವರ್ತಿ ಸಂಗೀತ, ವಿ ಲಕ್ಷ್ಮಣ್ ಅವರ ಛಾಯಾಗ್ರಹಣ, ಡಿ ವೆಂಕಟರತ್ನಂ ಅವರ ಸಂಕಲನ, ಚಿನ್ನಿ ಪ್ರಕಾಶ್ ಮತ್ತು ತಾರಾ ಅವರ ನೃತ್ಯ ಸಂಯೋಜನೆ, ನಾಗರಾಜ್ ಅವರ ಕಲೆ ಇರುವ ಚಿತ್ರವನ್ನು ಡಿವಿ ಸುಧೀಂದ್ರ ಅವರು ಪ್ರಚಾರ ಮಾಡಿದ್ದರು. ಈಗ ಮತ್ತೊಂದು ಬೆಳ್ಳಿತೆರೆಯ ಮೇಲೆ ವೀಕ್ಷಿಸುವ ಅವಕಾಶ. (ಒನ್ಇಂಡಿಯಾ ಕನ್ನಡ)