Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ವಿಷ್ಣುವರ್ಧನ್ ನೆನಪಲ್ಲಿ ಸ್ನೇಹಲೋಕ ಕ್ರಿಕೆಟ್ ಕಪ್
'ಸ್ನೇಹ ಲೋಕ ಕ್ರಿಕೆಟ್ ಕ್ಲಬ್' ವತಿಯಿಂದ ಡಾ.ವಿಷ್ಣುವರ್ಧನ್ ಸ್ಮರಣಾರ್ಥವಾಗಿ ಆಗಸ್ಟ್ 16ರಂದು ಎಂದಿನಂತೆ ಬೆಂಗಳೂರು ಜಯನಗರ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ 'ಡಾ.ವಿಷ್ಣುವರ್ಧನ್ ಟ್ರೋಫಿ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್' ನಡೆಯಲಿದೆ.
ಈ ಬಾರಿಯ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭವನ್ನು ಕ್ರಿಕೆಟ್ ಲೋಕದ ತಾರೆಯರಾದ ಜಿ.ಆರ್ ವಿಶ್ವನಾಥ್, ಸಯ್ಯದ್ ಕಿರ್ಮಾನಿ ಹಾಗೂ ರಘುರಾಮ್ ಅವರು ಚಾಲನೆ ನೀಡಲಿದ್ದಾರೆ.
ಈ ಟೂರ್ನಮೆಂಟ್ ಆಗಸ್ಟ್ 16ರಂದು ಪ್ರಾರಂಭಗೊಂಡು ಅಕ್ಟೋಬರ್ 11ರವರೆಗೂ ಪ್ರತಿ ವೀಕೆಂಡ್ ನಲ್ಲಿ ನಡೆಯಲಿದೆ. ಈ ಬಾರಿ ಸುಮಾರು 11 ಕಾರ್ಪೊರೇಟ್ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.
ವಿಶೇಷವಾಗಿ ಈ ವರ್ಷದ ಟೂರ್ನಮೆಂಟ್ ನ ಪ್ರಾಯೋಜಕತ್ವವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಹಿಸಿಕೊಂಡಿದ್ದು, ಪ್ರಶಸ್ತಿ ವಿತರಣೆಯ ಜವಾಬ್ದಾರಿ ಜೊತೆಗೆ ನಗದು ಬಹುಮಾನ ನೀಡಲಾಗುತ್ತಿದೆ ಎಂದು ಡಾ.ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಫೈನಲ್ ಪಂದ್ಯಾಟ ಅಕ್ಟೋಬರ್ 11ರಂದು ನಡೆಯಲಿದ್ದು, ಟೂರ್ನಮೆಂಟ್ ನಲ್ಲಿ ಗೆದ್ದ ತಂಡದವರಿಗೆ 25 ಸಾವಿರ ನಗದು ಬಹುಮಾನದ ಜೊತೆಗೆ ಟ್ರೋಫಿ ನೀಡಲಾಗುತ್ತದೆ.