Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ 'ಲಕ್ಷ್ಮಣ' ಚಿತ್ರತಂಡದ ಸರ್ ಪ್ರೈಸ್
ಸ್ಯಾಂಡಲ್ ವುಡ್ ಸೂಪರ್ ಸ್ಟಾರ್, ಬ್ಲಾಕ್ ಕೋಬ್ರಾ, ಕರಿ ಚಿರತೆ ದುನಿಯಾ ವಿಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳ ಜೊತೆ ತಮ್ಮ ಜನ್ಮದಿನವನ್ನ ಇವತ್ತು ಆಚರಿಸಿಕೊಂಡ ದುನಿಯಾ ವಿಜಯ್ ಗೆ ಸ್ಪೆಷಲ್ ಸರ್ ಪ್ರೈಸ್ ಸಿಕ್ಕಿದ್ದು 'ಲಕ್ಷ್ಮಣ' ಚಿತ್ರತಂಡದ ಕಡೆಯಿಂದ.
'ಲಕ್ಷ್ಮಣ' ನಿರ್ದೇಶಕ ಆರ್.ಚಂದ್ರು ಮತ್ತು ನಾಯಕ ಅನೂಪ್ ರೇವಣ್ಣ ಇವತ್ತು ದುನಿಯಾ ವಿಜಯ್ ಮನೆಗೆ ಭೇಟಿ ನೀಡಿ, ಅವರಿಗೆ ವಿಶ್ ಮಾಡಿ, ಶಾಲು-ಪೇಟ ತೊಡಿಸಿ ಸನ್ಮಾನ ಮಾಡಿದ್ದಾರೆ. [ಬೆಂಕಿ ಜೊತೆ ಸರಸವಾಡಿದ 'ಲಕ್ಷ್ಮಣ' ಹೀರೋ ಅನೂಪ್]
ಆರ್.ಚಂದ್ರು ನಿರ್ದೇಶನದ 'ಲಕ್ಷ್ಮಣ' ಚಿತ್ರದ ಚಿತ್ರೀಕರಣ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಕಾಂಗ್ರೆಸ್ ನಾಯಕ ರೇವಣ್ಣ ಪುತ್ರ ಅನೂಪ್ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ ಖಾಕಿ ತೊಟ್ಟು ಖಡಕ್ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸಿದ್ದಾರೆ.
ಆರ್.ಚಂದ್ರುಗೆ ಆಪ್ತರಾಗಿರುವ ದುನಿಯಾ ವಿಜಯ್ ಹುಟ್ಟುಹಬ್ಬದ ಸಂದರ್ಭದಲ್ಲಿ 'ಲಕ್ಷ್ಮಣ' ಕೂಡ ಸದ್ದು ಮಾಡುತ್ತಿದ್ದಾನೆ.