Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮರ ಯೋಧನ ಕುಟುಂಬಕ್ಕೆ ಸಹಾಯ ಮಾಡಿದ ದುನಿಯಾ ವಿಜಿ
ಸಿಯಾಚಿನ್ ನ ನಿರ್ಗಲ್ಲಿನಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ 'ಅಮರ' ಯೋಧ ಹನುಮಂತಪ್ಪ ಅವರ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಆರ್ಥಿಕ ಧನ ಸಹಾಯ ಮಾಡಲು ನಿರ್ಧರಿಸಿರುವ ವಿಚಾರವನ್ನು ನಾವು ನಿನಗೆ ಈ ಮೊದಲೇ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ತಾನೆ.
ಇದೀಗ ಹುತಾತ್ಮ ಯೋಧ ಹನುಮಂತಪ್ಪ ಮತ್ತವರ ಕುಟುಂಬವನ್ನು ಬೆಂಗಳೂರಿಗೆ ಕರೆಸಿಕೊಂಡ ನಿರ್ಮಾಪಕ ಕಮ್ ಅಕಾಡೆಮಿ ಅಧ್ಯಕ್ಷ ಸಾರಾ ಗೋವಿಂದು ಅವರು ಮಾತು ಕೊಟ್ಟಂತೆ ಒಂದು ಲಕ್ಷ ರೂಪಾಯಿ ಪರಿಹಾರ ಧನವನ್ನು ಕುಟುಂಬದವರ ಕೈಗೆ ಹಸ್ತಾಂತರಿಸಿದ್ದಾರೆ.[ಯೋಧ ಹನುಮಂತಪ್ಪ ಕುಟುಂಬಕ್ಕೆ KFCC ಯಿಂದ ಪರಿಹಾರ ಧನ]
ನಿರ್ದೇಶಕರ ಸಂಘದ ವತಿಯಿಂದ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸುವ ಉದ್ದೇಶದಿಂದ ಇತ್ತೀಚೆಗೆ ಕರೆದಿದ್ದ ಪತ್ರೀಕಾಗೋಷ್ಠಿಯಲ್ಲಿ ಅಮರ ಯೋಧ ಹನುಮಂತಪ್ಪ ಅವರ ತಾಯಿ ಬಸವ್ವ ಮತ್ತವರ ಮಡದಿ ಮಹಾದೇವಿ ಮತ್ತು ಪುಟ್ಟ ಮಗಳು ನೇತ್ರಾ ಅವರನ್ನು ಕರೆಸಿ ಅವರಿಗೆ ಧನಸಹಾಯ ಮಾಡಿದರು.[ಅಭಿಮಾನಿಯ ಅಂತಿಮ ಇಚ್ಛೆ ಪೂರ್ಣಗೊಳಿಸಿದ ವಿಜಿ]
ಅಂದಹಾಗೆ ಸದಾ ಕಷ್ಟದಲ್ಲಿರುವವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಹಾಯ ಮಾಡುತ್ತಾ ಬರುತ್ತಿರುವ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ದುನಿಯಾ ವಿಜಯ್ ಅವರು ಹುತಾತ್ಮ ಹನುಮಂತಪ್ಪ ಅವರ ಕುಟುಂಬಕ್ಕೂ ತಮ್ಮ ಕೈಲಾದಷ್ಟು ಸಹಾಯ ಮಾಡಿದ್ದಾರೆ.[ದುನಿಯಾ ವಿಜಯ್ ಕಟ್ಟಾ ಅಭಿಮಾನಿ ಆಂಟೋನಿ ರಾಜ್ ನಿಧನ]
ಪತ್ರೀಕಾಗೋಷ್ಠಿಯಲ್ಲಿ ದುನಿಯಾ ವಿಜಯ್ ಅವರು ಕೂಡ ಭಾಗವಹಿಸಿದ್ದು, ಇದೇ ಸಂದರ್ಭದಲ್ಲಿ ಯೋಧ ಹನುಮಂತಪ್ಪ ಅವರ ಕುಟುಂಬಕ್ಕೆ 25 ಸಾವಿರ ರೂಪಾಯಿ ಚೆಕ್ ವಿತರಿಸಿದ್ದಾರೆ.[ಚಿತ್ರಗಳು: ವಿಜಿ 'ಮಾಸ್ತಿ ಗುಡಿ'ಗೆ ಅಮ್ಮಂದಿರಿಂದ ಮುಹೂರ್ತ]
ಇದು ನಟ ದುನಿಯಾ ವಿಜಯ್ ಅವರ ಸಹಾಯ ಮಾಡುವ ಮನಸ್ಥಿತಿಯನ್ನು ತೋರಿಸುತ್ತಿದ್ದು, ಒಟ್ನಲ್ಲಿ ತಮ್ಮ ಸರಳತೆಯಿಂದ ಸೂಪರ್ ಸ್ಟಾರ್ ವಿಜಿ ಅವರು ಸಾವಿರಾರು ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ.