Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡವ್' ನೋಡಿ ಶಭಾಷ್ ಎಂದ ಕರಿಯ ವಿಜಯ್
ಇತ್ತೀಚೆಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರು ಹೊಸಬರ ಚಿತ್ರಗಳನ್ನು ನೋಡಿ ಅವರ ನಟನೆಯನ್ನು ಮೆಚ್ಚಿ ಹೊಗಳುವುದು ಒಂಥರಾ ಟ್ರೆಂಡ್ ಆದಂತಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 'ರಂಗಿತರಂಗ' ನೋಡಿ ಭೇಷ್ ಅಂದರೆ, ಶಿವರಾಜ್ ಕುಮಾರ್, ಧ್ರುವ ಸರ್ಜಾ ಹಾಗೂ ಇನ್ನುಳಿದ ಸ್ಯಾಂಡಲ್ ವುಡ್ ತಾರೆಯರು ಸೂರಿ ಅವರ 'ಕೆಂಡಸಂಪಿಗೆ' ಪರಿಮಳವನ್ನು ಇಷ್ಟಪಟ್ಟಿದ್ದಾರೆ. ಅಲ್ಲದೇ ದರ್ಶನ್, ಯಶ್ 'ನಾನು ಅವನಲ್ಲ ಅವಳಿಗೆ' ಮನಸೋತಿದ್ದಾರೆ.
ಇದೀಗ ಇವರ ಸಾಲಿಗೆ ಹೊಸ ಸೇರ್ಪಡೆ ನಮ್ಮ ಕರಿಯ ದುನಿಯಾ ವಿಜಿ. ಹೌದು ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಿ ಅವರು ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರೊಂದಿಗೆ ಭಾನುವಾರದಂದು (ಅಕ್ಟೋಬರ್ 11) ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ವೀಕ್ಷಕರೊಂದಿಗೆ ತಾವು ಒಬ್ಬ ಸಾಮಾನ್ಯ ಪ್ರೇಕ್ಷಕನಾಗಿ ನಿರ್ಮಾಪಕ ಸಾ.ರಾ.ಗೋವಿಂದು ಅವರ ಪುತ್ರ ಅನೂಪ್ ಸಾ.ರಾ.ಗೋವಿಂದು ಅಭಿನಯದ ಚೊಚ್ಚಲ ಚಿತ್ರ 'ಡವ್' ಮ್ಯಾಟ್ನಿ ಶೋ ನೋಡಿದ್ದಾರೆ.[ಸಂತು 'ಡವ್'ಗೆ ವಿಮರ್ಶಕರು ಕ್ಲೀನ್ ಬೌಲ್ಡ್ ಆದ್ರಾ?]
ಚಿತ್ರ ನೋಡಿ ಮೆಚ್ಚಿರುವ ದುನಿಯಾ ವಿಜಿ ಅವರು ಅನೂಪ್ ನಟನೆಯನ್ನು ಹೊಗಳಿ ಅವರ ಉತ್ತಮ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
ಸ್ಯಾಂಡಲ್ ವುಡ್ ನ ನಿರ್ಮಾಪಕ ಸಾ.ರಾ.ಗೋವಿಂದು ಅವರ ಪುತ್ರ ಅನೂಪ್ ಸಾ.ರಾ.ಗೋವಿಂದು ಅಭಿನಯದ ಚೊಚ್ಚಲ ಚಿತ್ರ 'ಡವ್' ಕಳೆದ ಶುಕ್ರವಾರ (ಅಕ್ಟೋಬರ್ 9) ತೆರೆ ಕಂಡು ಯುವಕರ ಮನತಟ್ಟಿದೆ.['ಮಾಸ್ ಹೀರೋ' ಅಂತ ಅಂಬರೀಶ್ ಕರೆದದ್ದು ಯಾರಿಗೆ?]
ವರ್ಷಗಳಿಂದ ಬಿಡುಗಡೆಯಾಗಲು ಹಿಂದೇಟು ಹಾಕುತ್ತಿದ್ದ 'ಡವ್' ಕೊನೆಗೂ ಹಾರಾಡಿದೆ. ನಿರ್ದೇಶಕ ಅಲೆಮಾರಿ ಸಂತು ಆಕ್ಷನ್-ಕಟ್ ಹೇಳಿರುವ ಚಿತ್ರದಲ್ಲಿ ಸಾಲಿಗ್ರಾಮದ ಹುಡುಗ ಅನೂಪ್ ಗೆ ನಾಯಕಿಯಾಗಿ ಅದಿತಿ ಮಿಂಚಿದ್ದರು.[ಎಲ್ಲೋ ನನ್ 'ಡವ್' ಟೀಸರ್ ಔಟ್ ಕಣ್ಲಾ]
ಬಿ.ಕೆ ಶ್ರೀನಿವಾಸ್ ಬಂಡವಾಳ ಹೂಡಿರುವ ಚಿತ್ರ ವಿಮರ್ಶಕರಿಂದ ಉತ್ತಮ ಪ್ರಶಂಸೆ ಪಡೆದುಕೊಂಡಿದೆ. ಹರೆಯದ ಯುವಕರ ಪ್ರೀತಿ-ಪ್ರೇಮದ ಕಥೆಗೆ ಹೊಸ ಟ್ವಿಸ್ಟ್ ಕೊಟ್ಟಿರುವ ನಿರ್ದೇಶಕರು ಯುವಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.